Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply to ರಾಮಚಂದ್ರ ಕುಲಕರ್ಣಿ. Cancel reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...