Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply to ರಾಮಚಂದ್ರ ಕುಲಕರ್ಣಿ. Cancel reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್