Home / ಲೇಖನ / ಇತರೆ / ನಂಬಿಕೆ

ನಂಬಿಕೆ

ಪ್ರಿಯ ಸಖಿ,
ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ ‘ನಂಬಿಕೆ’ ಎಂಬ ಕವನದ ಈ ಸಾಲುಗಳನ್ನು ನೋಡು,
ನನ್ನ ನಂಬಿಕೆಯೊಂದು ಆಕಾಶ
ನಿಜ ಅದಕೆ ತಳಬುಡವಿಲ್ಲ
ನಾನೆಷ್ಟು ಬೆಳೆದರೂ ನನಗೆ ನಿಲುಕುವುದಿಲ್ಲ
ದೂರದಿಂದಲ್ಲದೆ ನಾನದನು
ಮುಟ್ಟಿ ಅನುಭವಿಸಿಲ್ಲ
ಮೇಲೆ ನೋಡದೆ ಸಟೆದುಕೊಂಡೇ
ನಡೆದರೂ ಅದು ಸದಾ ನನ್ನ ತಲೆಯ ಮೇಲೆ
ಇಲ್ಲಿ ಕವಿ ವ್ಯಕ್ತಿನಿಷ್ಟಕವಾದ ಹಾಗೂ ಬದುಕನ್ನು ಆವರಿಸಿಕೊಂಡಿರುವ ನಂಬಿಕೆಯ ಕುರಿತು ಚಿಂತಿಸುತ್ತಾರೆ. ನಂಬಿಕೆಯೆಂಬುದು ಆಕಾಶದಂತೆ ವಿಶಾಲವಾದುದು ಅಗಮ್ಯವಾದುದು. ಕವಿಯು ಪ್ರಶ್ನಿಸಿದರೂ ಅವರ ಮಿತಿಯನ್ನು ಮೀರಿರುವಂತಹುದು ನಂಬಿಕೆ. ಅದು ಮುಟ್ಟಿ ನೋಡಲು ಬರುವಂತದ್ದಲ್ಲ. ಅನುಭವಕ್ಕೆ ಮಾತ್ರ ಬರುವಂತದ್ದು, ಆ ನಂಬಿಕೆಯನ್ನು ಬುದ್ಧಿಪೂರ್ವಕವಾಗಿ ತಿರಸ್ಕರಿಸಲು ಹೋದರೂ ಮನಃಪೂರ್ವಕವಾಗಿ ಒಪ್ಪಿಕೊಂಡಿದ್ದಾದ್ದರಿಂದ ಕೊನೆಗೂ ನಂಬಿಕೆಯೇ ಗೆಲ್ಲುತ್ತದೆ ಎನ್ನುತ್ತಾರೆ ಕವಿ.

ಸಖಿ, ಆದರೆ ವ್ಯಕ್ತಿ ವ್ಯಕ್ತಿಗಳಲ್ಲಿ, ವಿಚಾರಗಳಲ್ಲಿ, ಧರ್ಮದಲ್ಲಿ, ಒಳಿತಿನಲ್ಲಿ, ಮೌಲ್ಯಗಳಲ್ಲಿ, ನೀತಿಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಿರುವ ಇಂದಿನ ಮನುಷ್ಯ ಎಂತಹಾ ಅಧೋಗತಿಗಿಳಿಯುತ್ತಿದ್ದಾನಲ್ಲವೇ? ಅದಕ್ಕೆ ಕಾರಣವನ್ನು ಹುಡುಕುತ್ತಾ ಆಸ್ಕರ್ ವೈಲ್ಡ್ “`We did not dare breath a prayer or give our anguish scope! Something was dead in each of us and what was dead was hope’  ಒಂದು ಪ್ರಾರ್ಥನೆಯನ್ನು ಉಚ್ಚರಿಸುವ, ನಮ್ಮ ವೇದನೆಗೂ ಒಂದು ಅವಕಾಶ ಕೊಡುವ ಧೈರ್ಯ ನಮ್ಮಲ್ಲಿಲ್ಲ. ನಮ್ಮೆಲ್ಲರಲ್ಲೂ ಏನೋ ಒಂದು ಸತ್ತುಹೋಗಿದೆ! ಅದು ನಂಬಿಕೆ! ಎನ್ನುತ್ತಾರೆ.

ಹಾಗೆಂದು ಎಲ್ಲವನ್ನು ಅಂಧವಾಗಿ ನಂಬಬೇಕೆಂದೂ ಅರ್ಥವಲ್ಲ. ಮೊದಲು ನಂಬಿಕೆ, ನಂತರ ಪರೀಕ್ಷೆ, ಪರೀಕ್ಷೆ ಫಲ ಕೊಟ್ಟಾಗ ಅಚಲ ಶ್ರದ್ಧೆ ಮೂಡುತ್ತದೆ. ಆಂಗ್ಲಭಾಷೆಯ ಒಂದು ನಾಣ್ಣುಡಿ ಹೀಗೆ ಹೇಳುತ್ತದೆ. ‘Hope for the best and prepare for the worst’  ಒಳಿತಿಗಾಗಿ ನಂಬಿಕೆ ಇರಲಿ, ಕೆಟ್ಟದ್ದನ್ನೆದುರಿಸಲು ತಯಾರಾಗಿರೋಣ ಎಂದು ಈಗ ನಾವು ಮಾಡಬೇಕಾದದ್ದೂ ಇದೇ ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...