Home / ಲೇಖನ / ಇತರೆ / ಆತ್ಮ ಸೌಂದರ್ಯ

ಆತ್ಮ ಸೌಂದರ್ಯ

ಪ್ರಿಯ ಸಖಿ,
ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ
ಅರಿಯಲಿಲ್ಲವಲ್ಲ
ಆತ್ಮನ ಮರೆತು ಕೆಟ್ಟರೆಲ್ಲಾ
ಹೊರಗಣ ಸೋಗೆಯ
ತಿಂದೊಳಗಿನ
ರಸದಿರವನರಿಯದಿಹ ಕುರಿಯಂತೆಲ್ಲಾ
ಎಂದಿದ್ದಾರೆ. ಕುರಿ ಸೋಗೆಯನ್ನು ಜಗಿದು ಉಗಿಯುತ್ತದೆ. ಅದಕ್ಕೆ ಆ ಗರಿಯೊಳಗಿನ ರಸದ ಅರಿವು ಇರುವುದೇ ಇಲ್ಲ. ಹಾಗೇ ನಾವು ಆತ್ಮದ ಔನ್ನತ್ಯವನ್ನು ಮರೆತು ಹೊರಗಿನ ಆಡಂಬರಕ್ಕೆ ಮನಸೋತು ಹೋಗಿದ್ದೇವೆ ಎನ್ನುತ್ತಾರೆ.

ನಮ್ಮ ಎಲ್ಲ ಧರ್ಮಗಳೂ ಆತ್ಮೋದ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿವೆ. ಬಹಿರಂಗ ಶುದ್ಧಿಗಿಂತಾ ಅಂತರಂಗ ಶುದ್ಧಿಯೇ ಮುಖ್ಯವಾದುದು. ದೇವರಿಗಾಗಿ ಕೋರಿಕೆಗೆ ಗಂಟೆಗಟ್ಟಲೆ ಪೂಜೆ, ಜಪ, ತಪ, ಧ್ಯಾನಗಳನ್ನು ಮಾಡಿಯೂ ಮನಸ್ಸನ್ನು ಕೇಂದ್ರೀಕರಿಸಲಾಗದ ಮೇಲೆ ಅಂತಹಾ ಪೂಜೆ, ಧ್ಯಾನಗಳಿಂದ ಪ್ರಯೋಜನವೇನು? ದೇಹವನ್ನು ನಾನಾ ವಿಧವಾದ ವಸ್ತ್ರ, ಆಭರಣ, ಪ್ರಸಾಧನಗಳಿಂದ ಸಿಂಗರಿಸಿ ಅದನ್ನೇ ನಾವು ಸೌಂದರ್ಯವೆಂದುಕೊಂಡು ಬೀಗುತ್ತೇವೆ. ಆದರೆ ನಿಜವಾದ ಆತ್ಮ ಸೌಂದರ್ಯಕ್ಕೆ ಇಂತಹ ಯಾವುದೇ ಆಡಂಬರವೂ ಬೇಡ.

ಹಾಗಾದರೆ ಸಖೀ ಈ ಆತ್ಮಸೌಂದರ್ಯವೆಂದರೆ ಏನು? ಅದನ್ನು ವೃದ್ಧಿಸಿಕೊಳ್ಳುವುದು ಹೇಗೆ? ನಾವು ಒಳ್ಳೆಯದೆಂದು ನಂಬಿರುವ ತತ್ವಗಳು, ಮೌಲ್ಯಗಳು, ಗುಣಗಳು ಇವುಗಳ ಅಳವಡಿಕೆಯೇ ಆತ್ಮದ ಸಿಂಗಾರದೊಡವೆಗಳು. ಒಳ್ಳೆಯದನ್ನು ಕುರಿತು ಆಲೋಚಿಸುವ, ಒಳ್ಳೆಯದನ್ನು ಮಾಡುವ, ಒಳ್ಳೆಯ ರೀತಿಯಲ್ಲಿ ನಡೆಯುವ ಬದುಕಿಗೆ ಯಾವ ಸೋಗೂ ಬೇಕಿಲ್ಲ. ಇಂದಿನ ಬದುಕಿನ ಅಧೋಗತಿಗೆ ಕಾರಣವೇ ನಾವು. ಆತ್ಮವನ್ನು ನಿರ್ಲಕ್ಷಿಸಿರುವುದು ಬುದ್ಧಿಪ್ರಧಾನವಾದ, ವ್ಯಾವಹಾರಿಕ ಬದುಕೇ ನಮಗಿಂದು ಮಹತ್ವದ್ದಾಗಿರುವುದರಿಂದಲೇ ನಮ್ಮ ಸುತ್ತಲೂ ಅನಾಚಾರ ಹೆಚ್ಚಾಗಿ ಶಾಂತಿ ನೆಮ್ಮದಿಗಳು ಕಾಣೆಯಾಗಿವೆ.

ನಿಜವಾದ ಆತ್ಮಸೌಂದರ್ಯದ ಬಗೆಗೆ ಮನುಜ ತಿಳಿದುಕೊಂಡು ಎಚ್ಚೆತ್ತು ಆಡಂಬರದ ಹಾದಿಯನ್ನು ಬಿಟ್ಟು ಸತ್ಯದ ಹಾದಿಯಲ್ಲಿ ನಡೆಯತೊಡಗಿದಾಗ ನಿಜವಾಗಿ ನಾವು ‘ಆತ್ಮ’ ಹೊಂದಿದವರಾಗುತ್ತೇವೆ. ಇಂತಹ ಶಾಶ್ವತವಾದ ಆತ್ಮ ಸೌಂದರ್ಯವನ್ನು ಪಡೆಯುವೆಡೆಗೆ ಹಂತಹಂತವಾಗಿಯಾದರೂ ಸರಿ ನಾವು ಹೆಜ್ಜೆ ಹಾಕೋಣ. ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...