Home / ಲೇಖನ / ಇತರೆ / ಆತ್ಮ ಸೌಂದರ್ಯ

ಆತ್ಮ ಸೌಂದರ್ಯ

ಪ್ರಿಯ ಸಖಿ,
ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ
ಅರಿಯಲಿಲ್ಲವಲ್ಲ
ಆತ್ಮನ ಮರೆತು ಕೆಟ್ಟರೆಲ್ಲಾ
ಹೊರಗಣ ಸೋಗೆಯ
ತಿಂದೊಳಗಿನ
ರಸದಿರವನರಿಯದಿಹ ಕುರಿಯಂತೆಲ್ಲಾ
ಎಂದಿದ್ದಾರೆ. ಕುರಿ ಸೋಗೆಯನ್ನು ಜಗಿದು ಉಗಿಯುತ್ತದೆ. ಅದಕ್ಕೆ ಆ ಗರಿಯೊಳಗಿನ ರಸದ ಅರಿವು ಇರುವುದೇ ಇಲ್ಲ. ಹಾಗೇ ನಾವು ಆತ್ಮದ ಔನ್ನತ್ಯವನ್ನು ಮರೆತು ಹೊರಗಿನ ಆಡಂಬರಕ್ಕೆ ಮನಸೋತು ಹೋಗಿದ್ದೇವೆ ಎನ್ನುತ್ತಾರೆ.

ನಮ್ಮ ಎಲ್ಲ ಧರ್ಮಗಳೂ ಆತ್ಮೋದ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿವೆ. ಬಹಿರಂಗ ಶುದ್ಧಿಗಿಂತಾ ಅಂತರಂಗ ಶುದ್ಧಿಯೇ ಮುಖ್ಯವಾದುದು. ದೇವರಿಗಾಗಿ ಕೋರಿಕೆಗೆ ಗಂಟೆಗಟ್ಟಲೆ ಪೂಜೆ, ಜಪ, ತಪ, ಧ್ಯಾನಗಳನ್ನು ಮಾಡಿಯೂ ಮನಸ್ಸನ್ನು ಕೇಂದ್ರೀಕರಿಸಲಾಗದ ಮೇಲೆ ಅಂತಹಾ ಪೂಜೆ, ಧ್ಯಾನಗಳಿಂದ ಪ್ರಯೋಜನವೇನು? ದೇಹವನ್ನು ನಾನಾ ವಿಧವಾದ ವಸ್ತ್ರ, ಆಭರಣ, ಪ್ರಸಾಧನಗಳಿಂದ ಸಿಂಗರಿಸಿ ಅದನ್ನೇ ನಾವು ಸೌಂದರ್ಯವೆಂದುಕೊಂಡು ಬೀಗುತ್ತೇವೆ. ಆದರೆ ನಿಜವಾದ ಆತ್ಮ ಸೌಂದರ್ಯಕ್ಕೆ ಇಂತಹ ಯಾವುದೇ ಆಡಂಬರವೂ ಬೇಡ.

ಹಾಗಾದರೆ ಸಖೀ ಈ ಆತ್ಮಸೌಂದರ್ಯವೆಂದರೆ ಏನು? ಅದನ್ನು ವೃದ್ಧಿಸಿಕೊಳ್ಳುವುದು ಹೇಗೆ? ನಾವು ಒಳ್ಳೆಯದೆಂದು ನಂಬಿರುವ ತತ್ವಗಳು, ಮೌಲ್ಯಗಳು, ಗುಣಗಳು ಇವುಗಳ ಅಳವಡಿಕೆಯೇ ಆತ್ಮದ ಸಿಂಗಾರದೊಡವೆಗಳು. ಒಳ್ಳೆಯದನ್ನು ಕುರಿತು ಆಲೋಚಿಸುವ, ಒಳ್ಳೆಯದನ್ನು ಮಾಡುವ, ಒಳ್ಳೆಯ ರೀತಿಯಲ್ಲಿ ನಡೆಯುವ ಬದುಕಿಗೆ ಯಾವ ಸೋಗೂ ಬೇಕಿಲ್ಲ. ಇಂದಿನ ಬದುಕಿನ ಅಧೋಗತಿಗೆ ಕಾರಣವೇ ನಾವು. ಆತ್ಮವನ್ನು ನಿರ್ಲಕ್ಷಿಸಿರುವುದು ಬುದ್ಧಿಪ್ರಧಾನವಾದ, ವ್ಯಾವಹಾರಿಕ ಬದುಕೇ ನಮಗಿಂದು ಮಹತ್ವದ್ದಾಗಿರುವುದರಿಂದಲೇ ನಮ್ಮ ಸುತ್ತಲೂ ಅನಾಚಾರ ಹೆಚ್ಚಾಗಿ ಶಾಂತಿ ನೆಮ್ಮದಿಗಳು ಕಾಣೆಯಾಗಿವೆ.

ನಿಜವಾದ ಆತ್ಮಸೌಂದರ್ಯದ ಬಗೆಗೆ ಮನುಜ ತಿಳಿದುಕೊಂಡು ಎಚ್ಚೆತ್ತು ಆಡಂಬರದ ಹಾದಿಯನ್ನು ಬಿಟ್ಟು ಸತ್ಯದ ಹಾದಿಯಲ್ಲಿ ನಡೆಯತೊಡಗಿದಾಗ ನಿಜವಾಗಿ ನಾವು ‘ಆತ್ಮ’ ಹೊಂದಿದವರಾಗುತ್ತೇವೆ. ಇಂತಹ ಶಾಶ್ವತವಾದ ಆತ್ಮ ಸೌಂದರ್ಯವನ್ನು ಪಡೆಯುವೆಡೆಗೆ ಹಂತಹಂತವಾಗಿಯಾದರೂ ಸರಿ ನಾವು ಹೆಜ್ಜೆ ಹಾಕೋಣ. ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...