ಗುಣತ್ರಯ

ನಿತ್ಯ ಕಾಡುತ್ತಿವೆ ಏನಗೆ ಗುಣತ್ರಯಗಳು
ಅವೇ ರಜ ತಮ ಮತ್ತು ಸತ್ವಗಳು
ಒಂದೊಂದು ತನ್ನ ಇತಿಹಾಸ ಬಿತ್ತುವವು
ಈ ಮೂರು ಜೀವನ ಬಂಧನಕ್ಕೆ ಕಾರಣಗಳು

ಸ್ವಾರ್ಥ ಆಸೆ ಭೋಗದಲ್ಲಿ ತೇಲಿಸುವುದು
ತಮಗುಣವೆಂಬ ಕಾಣದ ಜಾತ ಶತ್ರು
ದೇಹ ಸುಖವೆ ಇದರ ಗುರಿಯಾಗಿಹುದು
ಜೀವನ ವಿನಾಶಕ್ಕೆ ಇದಾಗಿದೆ ಕತೃ

ತೃಸ್ಣೆಯ ಜಾಲವ ರಜೋ ಬೀಸುವುದು
ಕಾಮದ ಸನ್ನಿವೇಶಕ್ಕೆ ನಾಂದಿ ಹಾಡುವುದು
ಕರ್ಮಸಂಗದಿ ಈ ಆತ್ಮಕ್ಕೆ ಕಟ್ಟಿ ಹಾಕುವುದು
ಪಾಪದ ಹೊಂಡಗಳ ಆಳಕ್ಕೆ ತೋಡುವುದು

ಸತ್ವಗುಣ ಜ್ಞಾನದ ಸಲಾಕೆಯಾಗುವುದು
ದೇವರನ್ನು ತೋರುವ ಮಾರ್ಗನಿರ್ಮಿಸುವುದು
ಜ್ಞಾನ ಸಂಗದಿಂದ ಆತ್ಮ ಬಂಧಿಸುವುದು
ಮಾಣಿಕ್ಯ ವಿಠಲನಾದರೆ ಹರಿಯ ದರ್ಶಿಸುವುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀನು ಯಾರು?
Next post ಕಾಲ್ತೊಡರುವ ಜಾತಿ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…