ಶುದ್ಧವಾಗಲಿ ಅಂತರಂಗ

ಸಾಕು ನಿಲ್ಲಿಸು ನಿನ್ನಾಟ
ಬಹಿರಂಗದಲಿ ಮೆರೆಯಬೇಡ
ಎತ್ತೆತ್ತ ನೀನು ನಲಿದರೂ
ಮತ್ತೆ ಸೊನ್ನೆದತ್ತ ನಿ ನೋಡ

ಅಂತರಂಗದಲ್ಲಿ ಬೆಳಕಿಲ್ಲದೆ
ಯಾವುದಕ್ಕೆ ನಿನ್ನ ಕಾರ್ಯಭಾರ
ಎಲ್ಲಿಂದಲೊ ಬಂದು ನೆಲೆಸಿ
ನಿನ್ನದೆನ್ನುವುದು ಹುಚ್ಚು ಬಡಿವಾರ

ನಾಳೆ ನಿನ್ನದಲ್ಲ ಗೆಳೆಯ
ಪೋಲು ಮಾಡದಿರು ಈ ಕಾಲ
ಹರಿಗೆ ನೀನು ಮಿಸಲಾಗು
ಮಾಡಬೇಡ ಕರ್ಮವೆಂಬ ಸಾಲ

ಶುದ್ಧವಾಗಲಿ ನಿನ್ನ ಅಂತರಂಗ
ಅತ್ತು ಬಿಡು ನಿತ್ಯವು ನೀನು
ಕಂಗಳಲ್ಲಿ ಹರಿಯಲಿ ಕಂಬನಿ
ಮಾಣಿಕ್ಯ ವಿಠಲನ ಮುಕ್ತಿ ಜೇನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತಲಿ ಮಮತೆ ತುಂಬಿರಬೇಕು
Next post ಭಗತಸಿಂಗ ಮತ್ತು ಸಾವು

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…