ಏನು ಕಾಲ!

ಹರಿಯೆ ನಿನ್ನ ನೆನಪು ಬಾರದೆ
ಕಳೆದವೂ ಏಸು ಕಾಲ
ಜನುಮ ಜನುಮವು ಹೀಗೆ ನಾ
ಮಾಡಿದೆ ಕರ್ಮಗಳ ಸಾಲ

ಆಸೆಗಳ ಹಿಂದೆ ಓಡೋಡಿ ನಾನು
ನನ್ನ ಸಾರ್ಥಕತೆ ನಾಮರೆತೆ
ಬಾಳೆಲ್ಲವೂ ಹೀಗೆ ಯಾರಿಗೊ ಸೋರಿ
ಮಾಯಾ ಮೋಹದಲಿನಾ ಬೆರೆತೆ

ಸುಖದ ಪರಿಛಾಯೆ ಇಲ್ಲದ ಸುಖವೆ
ಸುಖದ ಲಾಲಸೆಗೆ ಏಸೊಂದು ಕುಯುಕ್ತಿ
ನಾನು ನನ್ನದೆಂಬ ಭ್ರಾಂತಿಯಲಿ ಕರಗಿ
ನಿತ್ಯ ಹೋರಾಟದಲಿ ಮರೆತೆ ಭಕ್ತಿ

ಈಗೊಂದು ಚಣವು ಜಾರದಿರಲಿ
ಅದು ನಿನಗಾಗಿ ಮೀಸಲಾಗಿರಲಿ
ಭಾವಗಳ ತುಂಬ ತುಂಬಲಿ ನಿನ್ನ ಧ್ಯಾನ
ಮಾಣಿಕ್ಯವಿಠಲನಿಗೆ ನೀ ಕೈಲಾಸವಾಗಿರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೂರು ಜನ್ಮದಲ್ಲೂ ನನಗೆ
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೫ನೆಯ ಖಂಡ – ಪ್ರತಿಕೂಲತೆ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…