ಕನ್ನಡ ಕೃಷಿ

ಕೃಷಿಯ ಮಾಡೋಣ ನಾವು
ಕನ್ನಡಾಂಬೆಯ ಮಡಿಲಲಿ
ಸಿರಿ ಕನ್ನಡದ ನೆಲದಲಿ ನಾವು
ಕನ್ನಡದ ಕೃಷಿಯ ಮಾಡೋಣ.

ತುಂಗ-ಭದ್ರ ಕೃಷ್ಣೆ ಕಾವೇರಿಯ
ಜೀವ ಜಲವ ಹರಿಸಿ
ಜನಮನವ ಹದವಾಗಿಸಿ
ಜನಮನದ ಕಳೆ ತೆಗೆಯೋಣ

ಬಿತ್ತೋಣ ಬೀಜ ಬಿತ್ತೋಣ
ಕರುಣಾಳ ಜನರ ಮನದಲಿ
ಸಿರಿ ಕನ್ನಡದ ಬೀಜವ ಬಿತ್ತೋಣ
ಕನ್ನಡದ ಫಲವ ಸವಿಯೋಣ

ಜಾತಿ ಧರ್ಮದ ಭೇದವ ಅಳಿಸಿ
ಭಾಷೆ ಭಾವನೆಯ ಕೀಳು ತೆಗೆಸಿ
ಬಾಂಧವ್ಯದ ಬೆಸುಗೆ ಹಾಕಿಸಿ
ಕನ್ನಡಾಂಬೆಗೆ ಶಿರಬಾಗಿ ನಮಿಸಿ

ದೇಶದೊಳು ರಾಜ್ಯದೊಳು
ಎಲ್ಲರೂ ಬೆರಗಾಗಿ ಮೆಚ್ಚುವಂತೆ
ಹಸನಾದ ಬದುಕು ನಡೆಸೋಣ
ಬಾಂಧವ್ಯದ ಬೆಸುಗೆ ಹಾಕೋಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ಷಮೆ
Next post ಮೌನ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

cheap jordans|wholesale air max|wholesale jordans|wholesale jewelry|wholesale jerseys