ಭಾರತೀಯ

ಭಾರತ ಮಾತೆಯ
ಮಮತೆಯ ಕುಡಿ
ಪಿತನ ಪ್ರೀತಿಯಲಿ
ಸಾಗುತ ಮುನ್ನಡಿ
ಗುರುವಿನ ಗರಡಿಯಲಿ
ಸಿದ್ಧಿಯ ನೀ ಪಡಿ

ಜಾತಿ ಧರ್ಮಗಳ
ಮೆಟ್ಟುತ ನೀ ನಡಿ
ಭಾಷೆ ಭಾವನೆಗಳ
ಸಂತೈಸುವ ನುಡಿ
ನೀನಾಗು ನಮ್ಮೀ
ಸಂಸ್ಕೃತಿಯ ಕನ್ನಡಿ

ಸಾರು ಜಗಕೆಲ್ಲ
ಮಾನವೀಯತೆಯ ಸಿರಿ
ನೀನಾಗು ಮಾನವ
ಧರ್ಮದ ಕೈಪಿಡಿ
ಇದೇ ನೋಡು
ಭಾರತದ ಪರಿವಿಡಿ.

ಭಾರತ ಮಾತೆಯ ಹೆಮ್ಮೆಯ ಪುತ್ರ
ಸದಾ ಸೇವೆಯ ಮಾಡು ಮಾತೆಯ ಹತ್ರ
ಸಾರು ಜಗಕ್ಕೆಲ್ಲ ಮಾನವೀಯತೆಯ ಸೂತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಳಿ
Next post ಪ್ರತಿಕ್ರಿಯೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…