Home / ಕವನ / ಕವಿತೆ / ಸು(ಅ)ಮಂಗಲೆ

ಸು(ಅ)ಮಂಗಲೆ

ಮುಡಿಗೆ ಮಲ್ಲಿಗೆ ಮುಡಿದು ಹಣೆಗೆ ಕುಂಕುಮವಿಟ್ಟು
ಹಸಿರು ಬಳೆಯ ಕೈಗೆ ಬೆಳ್ಳಿಯ ಕಾಲುಂಗುರವ ತೊಟ್ಟು
ಮಾಂಗಲ್ಯದಿ ಮತ್ತೈದೆಯಾಗಿ ಮನೆ ಬೆಳಗುವ ಸತಿ
ಮನೆಯ ಮನಸುಗಳ ಬೆಸೆಯುವೆ ನೀ ಸುಮತಿ
ಗರತಿ ನಿನಗೇತಕೆ ಈ ದುಸ್ಥಿತಿ?

ಮೂಡಣದಿ ಸೂರ್ಯ ಮೂಡುವ ಮುನ್ನ ನೀ ಎದ್ದೆ
ಮನೆ ಮಲಗುವ ತನಕ ಬದುಕ ಸಾಗಿಸುತ ನೀ ಬಂದೆ
ಬಣ್ಣದ ಬದುಕಿನ ಜೊತೆ ಬವಣೆಗಳ ಸಹಿಸುತ
ಸಂಸಾರ ರಥ ಸಾಗಿಸುವ ಕಡೆಗೀಲು ನೀನಂತೆ
ಗರತಿ ನಿನಗೇತಕೆ ಈ ದುಸ್ಥಿತಿ?

ಮುಹೂರ್ತಗಳಿಗೆಲ್ಲ ಸುಮಂಗಲೆಯರೇ ಭೂಷಣ
ಮಹಿಳೆಯರಿಲ್ಲದೇ ಕಾರಣಗಳೆಲ್ಲ ಭಣ ಭಣ
ಪತಿ ಬದುಕಿದ್ದ ಮಹಿಳೆಯರಿಗಷ್ಟೇ ಆಮಂತ್ರಣ
ವಿಧವೆಯರಿಗೆ ಹಾಕಿರುವರಲ್ಲ ನಾನಾ ನಿಯಂತ್ರಣ
ಗರತಿ ನಿನಗೇತಕೆ ಈ ದುಸ್ಥಿತಿ?

ಮಂಗಳ ಕಾರ್ಯಗಳಿಗೆ ಸುಮಂಗಲಿಯರೆ ಮೀಸಲಂತೆ
ಮಾಂಗಲ್ಯ ಇಲ್ಲದ ಮಹಿಳೆಯರೆಲ್ಲ ಅಮಂಗಳವಂತೆ
ಪತಿ ಇಲ್ಲದಿರೆ ಆರತಿಯೂ ನೀ ಬೆಳಗ ಬಾರದಂತೆ
ಈ ಕಟ್ಟುಪಾಡುಗಳೆಲ್ಲ ನಿನ್ನ ಕೊರಳಿಗೆ ಮೀಸಲಂತೆ
ಗರತಿ ನಿನಗೇತಕೆ ಈ ದುಸ್ಥಿತಿ?

ಮಲ್ಲಿಗೆ ಮುಡಿಗಿಲ್ಲದಿರೆ ಕೋಮಲೆ ನೀನಲ್ಲವೇನು?
ಕುಂಕುಮವು ಹಣೆಗಿಲ್ಲದಿರೆ ಕರುಣೆಯು ಬಾರದೇನು?
ಮಾಂಗಲ್ಯವಿಲ್ಲ ಎಂದರೆ ಮಮತೆಯು ಇಲ್ಲವೇನು?
ಕೈ ಬಳೆಗಳಿಲ್ಲದಿರೆ ಕೈ ಹಿಡಿದು ನಡೆಸಲಾರಳೇನು?
ಕಾಲುಂಗುರಗಳಿಲ್ಲದಿರೆ ನಮ್ಮ ಕಾಯ ಲಾರಳೇನು?
ಸರಿ ಹೋಗಲಾರದೇ ಗರತಿ ನಿನ್ನಯ ಸ್ಥಿತಿ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...