Home / ಕವನ / ಕವಿತೆ / ವೃದ್ಧಾಪ್ಯ – ಧೈರ್ಯ

ವೃದ್ಧಾಪ್ಯ – ಧೈರ್ಯ

ಚಿಂತಿಸದಿರು ಮನುಜ ಚಿಂತಿಸದಿರು
ನೀ ಒಂಟಿ ಎಂದು ಕೊರಗದಿರು || ಪ ||

ಹೆತ್ತವರ ಮರೆತರೆಂದು
ನೀವು ಕೊರಗದಿರಿ ಹೆತ್ತವರೆ
ಹಾಕದಿರಿ ಶಾಪ ಮಕ್ಕಳಿಗೆ
ನೀವು ಹೆತ್ತು ಹೊತ್ತು ಬೆಳೆಸಿದ
ಕುಡಿಗಳಲ್ಲವೇ ಅವು ನಿಮ್ಮ ಕುಡಿಗಳಲ್ಲವೇ?

ಹೆತ್ತವರ ನೋವು ಅರಿವಾಗದು ಇಂದು
ತಿಳಿಯುವುದು ಆ ನೋವು ಮುಂದೆ
ತಮಗೂ ಮಕ್ಕಳಾಗಿ ಹೊರ ದೂಡಿದಂದು
ಚಿಂತಿಸದಿರಿ ನಿಮಗೂ ಜೀವನವಿದೆ ಮುಂದೆ
ನೋವಿನಲ್ಲೂ ನಗುವ ಕಾಣುತ್ತ ಸಾಗಿ ಎಂದೆಂದೂ

ನೀವು ನಿತ್ಯವೂ ಜೀವ ತೇಯುವುದು
ಮಕ್ಕಳ ಸುಮಧುರ ಜೀವನಕ್ಕಾಗಿ
ಆ ಮಕ್ಕಳೂ ಮುಂದೆ ಜೀವ ತೇಯುವರು
ತಮ್ಮ ಮಕ್ಕಳ ಸುಮಧುರ ಜೀವನಕ್ಕಾಗಿ
ಈ ಸತ್ಯವನ್ನು ಅರಿತಾಗ ನೀ ಮರುಗಬೇಕೇನು?

ಕೆಲವರ ಬಾಳಿನಲ್ಲಿ ಬರುವ ಈ ಕಹಿಯು
ತಿಳಿಯಿರಿ ಇದೊಂದು ಸಾಮಾನ್ಯ ಪ್ರಕ್ರಿಯೆಯು
ಸಹಜವಾಗಿ ನೋಡು ನೀನು ಇದನ್ನು
ನಮ್ಮಂತೆಯೇ ಇಹುದು ನಮ್ಮ ಮಕ್ಕಳ ಬಾಳ್ವೆಯು
ಎನ್ನುವ ಮರ್ಮ ತಿಳಿದರೆ ಸವಿ ಬಾಳು ನಿನ್ನದು

ನಿನ್ನ ಬಲವ ನೀ ನಂಬಿ ಬದುಕು
ಬಲವಿರುವ ತನಕ ಕಾಯಕವ ಬಿಡದಿರು
ಬಂದ ಆದಾಯವನ್ನ ಯಾರಿಗೂ ಹಂಚದಿರು
ಬಲವಿಲ್ಲದಾಗ ನಿನಗದು ಆಶ್ರಯದ ಸೂರು
ಅದು ಇಲ್ಲವೆಂದಾದರೆ ವೃದ್ಧಾಶ್ರಮಕ್ಕೆ ಸೇರು

ಚಿಂತಿಸದಿರು ಮನುಜ ಚಿಂತಿಸದಿರು
ನೀ ಒಂಟಿ ಎಂದು ಕೊರಗದಿರು || ಪ ||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...