Home / ಕವನ / ಕವಿತೆ / ಆಸೆ – ಆಘಾತ

ಆಸೆ – ಆಘಾತ

ನಿತ್ಯ ಸಾಗುತಲಿಹುದು ಜೀವನ ಭರದಿ
ಬೇಕು ಬೇಡಗಳ ತೆಗೆದು ಹಾಕುತಲಿ
ಏರಿಳಿತಗಳ ಮೆಲ್ಲನೆ ದಾಟುತಲಿ
ನಿತ್ಯವೂ ಉರುಳುತಿಹುದು ಬಾಳ ಬಂಡಿ
ನಿಲ್ಲುವುದೆಲ್ಲೋ? ಎಂದೋ ಸಾಗುವ ಬಂಡಿ!

ಎಡೆಬಿಡದೆ ಹಿಡಿದ ಕೆಲಸ ಕಾರ್ಯಗಳು
ಆದರೂ ತೀರದಾ ನಾನಾ ಬಯಕೆಗಳು
ಬದುಕು ನಡೆಸಲು ನಾನಾ ವೇಷಗಳು
ಗಂಡು ಹೆಣ್ಣೆನ್ನದೇ ದುಡಿವರು ಹಗಲಿರುಳು
ಸಾಧಿಸುವ ಛಲವೊಂದೇ ನಿನ್ನ ಉಸಿರಾಗಿರಲು

ಬೇಗನೆ ಮಾಡುವ ಭರದಲಿ ಯಂತ್ರಗಳ ತಂದೆ
ಬೇಗನೆ ಸೇರುವ ತವಕದಲಿ ವಾಹನಗಳ ತಂದೆ
ನಿನ್ನ ಸ್ವಾರ್ಥಕ್ಕಾಗಿ ನಿಸರ್ಗದ ವಿರುದ್ಧ ನೀನಡೆದೆ
ನೀ ಮಾಡುವ ಕೆಲಸಗಳೆಲ್ಲಾ ಆಯ ತಪ್ಪಿದರೆ
ಬಲಿಯಾಗುವ ಮೊದಲ ಜೀವ ನಿನ್ನದೇನೆ!

ಆಸೆಗಳ ಬೆನ್ಹತ್ತಿ ನೀ ಓಡುತಲಿರುವೆ
ಹಗಲು ರಾತ್ರಿಯನ್ನದೇ ದುಡಿಯುತಲಿರುವೆ
ಆಘಾತಗಳ ಅರಿವಿಲ್ಲದೇ ನೀ ಸಾಗುತಲಿರುವೆ
ಸಾವನ್ನೂ ಲೆಕ್ಕಿಸದೇ ಮುನ್ನಡೆಯುತಿರುವೆ
ಓಡುವ ಭರದಲಿ ಎಡವಿ ಬಿದ್ದರೆ ನೀ ಸಾಯುವೆ!

ಆಸೆಗಳ ಅದುಮಿ ಇಟ್ಟುಕೊ ಮನುಜ
ದುರಾಸೆಯೇ ದುಃಖದ ಮೂಲ ಕಣಜ
ಬದುಕು ಒಂದು ಸುಂದರ ಪ್ರಪಂಚ
ದುಡುಕಿ ಹೋದರೆ ಮತ್ತೆಂದೂ ಬಾರದು ಜೀವ
ಅರಿತು ನಡೆದರೆ ನಿನ್ನ ಬಾಳು ಸುಖಾಂತ್ಯ ನಿಜ

ಭೂಮಿಯಲ್ಲಿ ಜನಿಸಿದ ಮಾನವರು
ಕೋಟಿ, ಕೋಟಿ,
ಭೂಮಿಯಲ್ಲಿ ಬದುಕಿದ್ದರೂ ಸತ್ತಂತೆ ಬದುಕುವ
ಜನರು ಹಲವಾದರೆ,
ಭೂಮಿಯಲ್ಲಿ ಸತ್ತರೂ ಕೂಡ ಬದುಕಿದವರಂತೆ
ಅಮರರಾಗಿರುವ ಜನ ಕೆಲವರು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...