Home / ಕವನ / ಕವಿತೆ / ಆಸೆ – ಆಘಾತ

ಆಸೆ – ಆಘಾತ

ನಿತ್ಯ ಸಾಗುತಲಿಹುದು ಜೀವನ ಭರದಿ
ಬೇಕು ಬೇಡಗಳ ತೆಗೆದು ಹಾಕುತಲಿ
ಏರಿಳಿತಗಳ ಮೆಲ್ಲನೆ ದಾಟುತಲಿ
ನಿತ್ಯವೂ ಉರುಳುತಿಹುದು ಬಾಳ ಬಂಡಿ
ನಿಲ್ಲುವುದೆಲ್ಲೋ? ಎಂದೋ ಸಾಗುವ ಬಂಡಿ!

ಎಡೆಬಿಡದೆ ಹಿಡಿದ ಕೆಲಸ ಕಾರ್ಯಗಳು
ಆದರೂ ತೀರದಾ ನಾನಾ ಬಯಕೆಗಳು
ಬದುಕು ನಡೆಸಲು ನಾನಾ ವೇಷಗಳು
ಗಂಡು ಹೆಣ್ಣೆನ್ನದೇ ದುಡಿವರು ಹಗಲಿರುಳು
ಸಾಧಿಸುವ ಛಲವೊಂದೇ ನಿನ್ನ ಉಸಿರಾಗಿರಲು

ಬೇಗನೆ ಮಾಡುವ ಭರದಲಿ ಯಂತ್ರಗಳ ತಂದೆ
ಬೇಗನೆ ಸೇರುವ ತವಕದಲಿ ವಾಹನಗಳ ತಂದೆ
ನಿನ್ನ ಸ್ವಾರ್ಥಕ್ಕಾಗಿ ನಿಸರ್ಗದ ವಿರುದ್ಧ ನೀನಡೆದೆ
ನೀ ಮಾಡುವ ಕೆಲಸಗಳೆಲ್ಲಾ ಆಯ ತಪ್ಪಿದರೆ
ಬಲಿಯಾಗುವ ಮೊದಲ ಜೀವ ನಿನ್ನದೇನೆ!

ಆಸೆಗಳ ಬೆನ್ಹತ್ತಿ ನೀ ಓಡುತಲಿರುವೆ
ಹಗಲು ರಾತ್ರಿಯನ್ನದೇ ದುಡಿಯುತಲಿರುವೆ
ಆಘಾತಗಳ ಅರಿವಿಲ್ಲದೇ ನೀ ಸಾಗುತಲಿರುವೆ
ಸಾವನ್ನೂ ಲೆಕ್ಕಿಸದೇ ಮುನ್ನಡೆಯುತಿರುವೆ
ಓಡುವ ಭರದಲಿ ಎಡವಿ ಬಿದ್ದರೆ ನೀ ಸಾಯುವೆ!

ಆಸೆಗಳ ಅದುಮಿ ಇಟ್ಟುಕೊ ಮನುಜ
ದುರಾಸೆಯೇ ದುಃಖದ ಮೂಲ ಕಣಜ
ಬದುಕು ಒಂದು ಸುಂದರ ಪ್ರಪಂಚ
ದುಡುಕಿ ಹೋದರೆ ಮತ್ತೆಂದೂ ಬಾರದು ಜೀವ
ಅರಿತು ನಡೆದರೆ ನಿನ್ನ ಬಾಳು ಸುಖಾಂತ್ಯ ನಿಜ

ಭೂಮಿಯಲ್ಲಿ ಜನಿಸಿದ ಮಾನವರು
ಕೋಟಿ, ಕೋಟಿ,
ಭೂಮಿಯಲ್ಲಿ ಬದುಕಿದ್ದರೂ ಸತ್ತಂತೆ ಬದುಕುವ
ಜನರು ಹಲವಾದರೆ,
ಭೂಮಿಯಲ್ಲಿ ಸತ್ತರೂ ಕೂಡ ಬದುಕಿದವರಂತೆ
ಅಮರರಾಗಿರುವ ಜನ ಕೆಲವರು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...