ಆಸೆ – ಆಘಾತ

ನಿತ್ಯ ಸಾಗುತಲಿಹುದು ಜೀವನ ಭರದಿ
ಬೇಕು ಬೇಡಗಳ ತೆಗೆದು ಹಾಕುತಲಿ
ಏರಿಳಿತಗಳ ಮೆಲ್ಲನೆ ದಾಟುತಲಿ
ನಿತ್ಯವೂ ಉರುಳುತಿಹುದು ಬಾಳ ಬಂಡಿ
ನಿಲ್ಲುವುದೆಲ್ಲೋ? ಎಂದೋ ಸಾಗುವ ಬಂಡಿ!

ಎಡೆಬಿಡದೆ ಹಿಡಿದ ಕೆಲಸ ಕಾರ್ಯಗಳು
ಆದರೂ ತೀರದಾ ನಾನಾ ಬಯಕೆಗಳು
ಬದುಕು ನಡೆಸಲು ನಾನಾ ವೇಷಗಳು
ಗಂಡು ಹೆಣ್ಣೆನ್ನದೇ ದುಡಿವರು ಹಗಲಿರುಳು
ಸಾಧಿಸುವ ಛಲವೊಂದೇ ನಿನ್ನ ಉಸಿರಾಗಿರಲು

ಬೇಗನೆ ಮಾಡುವ ಭರದಲಿ ಯಂತ್ರಗಳ ತಂದೆ
ಬೇಗನೆ ಸೇರುವ ತವಕದಲಿ ವಾಹನಗಳ ತಂದೆ
ನಿನ್ನ ಸ್ವಾರ್ಥಕ್ಕಾಗಿ ನಿಸರ್ಗದ ವಿರುದ್ಧ ನೀನಡೆದೆ
ನೀ ಮಾಡುವ ಕೆಲಸಗಳೆಲ್ಲಾ ಆಯ ತಪ್ಪಿದರೆ
ಬಲಿಯಾಗುವ ಮೊದಲ ಜೀವ ನಿನ್ನದೇನೆ!

ಆಸೆಗಳ ಬೆನ್ಹತ್ತಿ ನೀ ಓಡುತಲಿರುವೆ
ಹಗಲು ರಾತ್ರಿಯನ್ನದೇ ದುಡಿಯುತಲಿರುವೆ
ಆಘಾತಗಳ ಅರಿವಿಲ್ಲದೇ ನೀ ಸಾಗುತಲಿರುವೆ
ಸಾವನ್ನೂ ಲೆಕ್ಕಿಸದೇ ಮುನ್ನಡೆಯುತಿರುವೆ
ಓಡುವ ಭರದಲಿ ಎಡವಿ ಬಿದ್ದರೆ ನೀ ಸಾಯುವೆ!

ಆಸೆಗಳ ಅದುಮಿ ಇಟ್ಟುಕೊ ಮನುಜ
ದುರಾಸೆಯೇ ದುಃಖದ ಮೂಲ ಕಣಜ
ಬದುಕು ಒಂದು ಸುಂದರ ಪ್ರಪಂಚ
ದುಡುಕಿ ಹೋದರೆ ಮತ್ತೆಂದೂ ಬಾರದು ಜೀವ
ಅರಿತು ನಡೆದರೆ ನಿನ್ನ ಬಾಳು ಸುಖಾಂತ್ಯ ನಿಜ

ಭೂಮಿಯಲ್ಲಿ ಜನಿಸಿದ ಮಾನವರು
ಕೋಟಿ, ಕೋಟಿ,
ಭೂಮಿಯಲ್ಲಿ ಬದುಕಿದ್ದರೂ ಸತ್ತಂತೆ ಬದುಕುವ
ಜನರು ಹಲವಾದರೆ,
ಭೂಮಿಯಲ್ಲಿ ಸತ್ತರೂ ಕೂಡ ಬದುಕಿದವರಂತೆ
ಅಮರರಾಗಿರುವ ಜನ ಕೆಲವರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಿರೀಟೆಗಳು
Next post ವ್ಯತ್ಯಾಸ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

cheap jordans|wholesale air max|wholesale jordans|wholesale jewelry|wholesale jerseys