Home / ಕವನ / ಕವಿತೆ / ಆಸೆ – ಆಘಾತ

ಆಸೆ – ಆಘಾತ

ನಿತ್ಯ ಸಾಗುತಲಿಹುದು ಜೀವನ ಭರದಿ
ಬೇಕು ಬೇಡಗಳ ತೆಗೆದು ಹಾಕುತಲಿ
ಏರಿಳಿತಗಳ ಮೆಲ್ಲನೆ ದಾಟುತಲಿ
ನಿತ್ಯವೂ ಉರುಳುತಿಹುದು ಬಾಳ ಬಂಡಿ
ನಿಲ್ಲುವುದೆಲ್ಲೋ? ಎಂದೋ ಸಾಗುವ ಬಂಡಿ!

ಎಡೆಬಿಡದೆ ಹಿಡಿದ ಕೆಲಸ ಕಾರ್ಯಗಳು
ಆದರೂ ತೀರದಾ ನಾನಾ ಬಯಕೆಗಳು
ಬದುಕು ನಡೆಸಲು ನಾನಾ ವೇಷಗಳು
ಗಂಡು ಹೆಣ್ಣೆನ್ನದೇ ದುಡಿವರು ಹಗಲಿರುಳು
ಸಾಧಿಸುವ ಛಲವೊಂದೇ ನಿನ್ನ ಉಸಿರಾಗಿರಲು

ಬೇಗನೆ ಮಾಡುವ ಭರದಲಿ ಯಂತ್ರಗಳ ತಂದೆ
ಬೇಗನೆ ಸೇರುವ ತವಕದಲಿ ವಾಹನಗಳ ತಂದೆ
ನಿನ್ನ ಸ್ವಾರ್ಥಕ್ಕಾಗಿ ನಿಸರ್ಗದ ವಿರುದ್ಧ ನೀನಡೆದೆ
ನೀ ಮಾಡುವ ಕೆಲಸಗಳೆಲ್ಲಾ ಆಯ ತಪ್ಪಿದರೆ
ಬಲಿಯಾಗುವ ಮೊದಲ ಜೀವ ನಿನ್ನದೇನೆ!

ಆಸೆಗಳ ಬೆನ್ಹತ್ತಿ ನೀ ಓಡುತಲಿರುವೆ
ಹಗಲು ರಾತ್ರಿಯನ್ನದೇ ದುಡಿಯುತಲಿರುವೆ
ಆಘಾತಗಳ ಅರಿವಿಲ್ಲದೇ ನೀ ಸಾಗುತಲಿರುವೆ
ಸಾವನ್ನೂ ಲೆಕ್ಕಿಸದೇ ಮುನ್ನಡೆಯುತಿರುವೆ
ಓಡುವ ಭರದಲಿ ಎಡವಿ ಬಿದ್ದರೆ ನೀ ಸಾಯುವೆ!

ಆಸೆಗಳ ಅದುಮಿ ಇಟ್ಟುಕೊ ಮನುಜ
ದುರಾಸೆಯೇ ದುಃಖದ ಮೂಲ ಕಣಜ
ಬದುಕು ಒಂದು ಸುಂದರ ಪ್ರಪಂಚ
ದುಡುಕಿ ಹೋದರೆ ಮತ್ತೆಂದೂ ಬಾರದು ಜೀವ
ಅರಿತು ನಡೆದರೆ ನಿನ್ನ ಬಾಳು ಸುಖಾಂತ್ಯ ನಿಜ

ಭೂಮಿಯಲ್ಲಿ ಜನಿಸಿದ ಮಾನವರು
ಕೋಟಿ, ಕೋಟಿ,
ಭೂಮಿಯಲ್ಲಿ ಬದುಕಿದ್ದರೂ ಸತ್ತಂತೆ ಬದುಕುವ
ಜನರು ಹಲವಾದರೆ,
ಭೂಮಿಯಲ್ಲಿ ಸತ್ತರೂ ಕೂಡ ಬದುಕಿದವರಂತೆ
ಅಮರರಾಗಿರುವ ಜನ ಕೆಲವರು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...