Home / ಕವನ / ಕವಿತೆ / ನಾವು ದೇವರಲ್ಲ

ನಾವು ದೇವರಲ್ಲ

ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ
ಜನತೆಯ ಹಿತಕೆ ನನ್ನಯ ತನಕ್ಕೆ

ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ
ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ

ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ
ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ

ನಾನು ಮಹಾತ್ಮನಾಗಿ ಮುನ್ನುಗ್ಗಿದೆ
ಮಹಾ ಜನತೆಯ ಸೇವೆಯನ್ನು ಗೈದೆ

ನಾನು ಧರ್ಮ ಸಂಸ್ಥಾಪಕನಾಗಿ ನಿಂತೆ
ಜಗ ಜೀವನದ ದಾರಿಯ ತೋರಿದೆ

ನಾವೆಲ್ಲಾ ಕೂಡಿ ಹೇಳಿದೆವು ಜಗದ ಜನರೇ
ನೀವೆಲ್ಲರೂ ಕೂಡಿ ಬಾಳಿರಿ ಎಂದು

ಆದರೆ… ನಾವೆಲ್ಲೂ ಹೇಳಲಿಲ್ಲ ನಮ್ಮನು
ದೇವರಂತೆ ಇಟ್ಟು ಪೂಜೆ ಮಾಡಿರೆಂದು

ನಾವೆಲ್ಲೂ ಹೇಳಲಿಲ್ಲ ನಮಗಾಗಿ ನೀವು
ಗುಡಿ ಗುಂಡಾರ ಮಸೀದಿ ಚರ್ಚ್ ಬಸದಿ ಕಟ್ಟಿರೆಂದು

ನಾವೆಲ್ಲೂ ಹೇಳಲಿಲ್ಲ ಆರಾಧಿಸುವ ಭರದಲಿ
ನೀವು ನೀವೇ ಕಿತ್ತಾಡಿ ಸಾಯಿರಿ ಎಂದು

ಅದೇಕೋ…. ಜನರೆ ನೀವು ಈ ರೀತಿಯಲ್ಲಿ
ಬದುಕು ನಡೆಸುತ್ತಿರುವಿರಿ ನಮಗೇನೂ ತಿಳಿಯದು

ನಾವೆಲ್ಲರೂ ದೇವರಲ್ಲ ನಿಮ್ಮಂತೆ ಮಾನವರು
ನಮಗಾಗಿ ನೀವು ಜೀವ ಕೊಡ ಬೇಕು ಏಕೆ?

ಜಗದ ಸೃಷ್ಟಿಗೆ ಕಾರಣನಾದ ದೇವರು ಯಾರೆಂದು
ನಮಗೇ ಇನ್ನೂ ತಿಳಿದಿಲ್ಲ

ನಮ್ಮನ್ನು ದೇವರಂತೆ ಮೂರ್ತಿ ಮಾಡಿ ಪೂಜೆ
ಮಾಡುವುದು ನಮಗೆ ಬೇಕಿಲ್ಲ

ನಮ್ಮೆಲ್ಲರ ಆಸೆ ಒಂದೇ ಮಾನವತೆಯ ಅರಿತು ಬಾಳಿರಿ
ಸುಖ ಸಮೃದ್ಧಿಯ ಬಾಳು ನಿಮ್ಮದಾಗಿರಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...