Home / ಕವನ / ಕವಿತೆ / ನಾವು ದೇವರಲ್ಲ

ನಾವು ದೇವರಲ್ಲ

ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ
ಜನತೆಯ ಹಿತಕೆ ನನ್ನಯ ತನಕ್ಕೆ

ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ
ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ

ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ
ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ

ನಾನು ಮಹಾತ್ಮನಾಗಿ ಮುನ್ನುಗ್ಗಿದೆ
ಮಹಾ ಜನತೆಯ ಸೇವೆಯನ್ನು ಗೈದೆ

ನಾನು ಧರ್ಮ ಸಂಸ್ಥಾಪಕನಾಗಿ ನಿಂತೆ
ಜಗ ಜೀವನದ ದಾರಿಯ ತೋರಿದೆ

ನಾವೆಲ್ಲಾ ಕೂಡಿ ಹೇಳಿದೆವು ಜಗದ ಜನರೇ
ನೀವೆಲ್ಲರೂ ಕೂಡಿ ಬಾಳಿರಿ ಎಂದು

ಆದರೆ… ನಾವೆಲ್ಲೂ ಹೇಳಲಿಲ್ಲ ನಮ್ಮನು
ದೇವರಂತೆ ಇಟ್ಟು ಪೂಜೆ ಮಾಡಿರೆಂದು

ನಾವೆಲ್ಲೂ ಹೇಳಲಿಲ್ಲ ನಮಗಾಗಿ ನೀವು
ಗುಡಿ ಗುಂಡಾರ ಮಸೀದಿ ಚರ್ಚ್ ಬಸದಿ ಕಟ್ಟಿರೆಂದು

ನಾವೆಲ್ಲೂ ಹೇಳಲಿಲ್ಲ ಆರಾಧಿಸುವ ಭರದಲಿ
ನೀವು ನೀವೇ ಕಿತ್ತಾಡಿ ಸಾಯಿರಿ ಎಂದು

ಅದೇಕೋ…. ಜನರೆ ನೀವು ಈ ರೀತಿಯಲ್ಲಿ
ಬದುಕು ನಡೆಸುತ್ತಿರುವಿರಿ ನಮಗೇನೂ ತಿಳಿಯದು

ನಾವೆಲ್ಲರೂ ದೇವರಲ್ಲ ನಿಮ್ಮಂತೆ ಮಾನವರು
ನಮಗಾಗಿ ನೀವು ಜೀವ ಕೊಡ ಬೇಕು ಏಕೆ?

ಜಗದ ಸೃಷ್ಟಿಗೆ ಕಾರಣನಾದ ದೇವರು ಯಾರೆಂದು
ನಮಗೇ ಇನ್ನೂ ತಿಳಿದಿಲ್ಲ

ನಮ್ಮನ್ನು ದೇವರಂತೆ ಮೂರ್ತಿ ಮಾಡಿ ಪೂಜೆ
ಮಾಡುವುದು ನಮಗೆ ಬೇಕಿಲ್ಲ

ನಮ್ಮೆಲ್ಲರ ಆಸೆ ಒಂದೇ ಮಾನವತೆಯ ಅರಿತು ಬಾಳಿರಿ
ಸುಖ ಸಮೃದ್ಧಿಯ ಬಾಳು ನಿಮ್ಮದಾಗಿರಲಿ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...