Home / ಕವನ / ಕವಿತೆ / ನಾವು ದೇವರಲ್ಲ

ನಾವು ದೇವರಲ್ಲ

ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ
ಜನತೆಯ ಹಿತಕೆ ನನ್ನಯ ತನಕ್ಕೆ

ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ
ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ

ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ
ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ

ನಾನು ಮಹಾತ್ಮನಾಗಿ ಮುನ್ನುಗ್ಗಿದೆ
ಮಹಾ ಜನತೆಯ ಸೇವೆಯನ್ನು ಗೈದೆ

ನಾನು ಧರ್ಮ ಸಂಸ್ಥಾಪಕನಾಗಿ ನಿಂತೆ
ಜಗ ಜೀವನದ ದಾರಿಯ ತೋರಿದೆ

ನಾವೆಲ್ಲಾ ಕೂಡಿ ಹೇಳಿದೆವು ಜಗದ ಜನರೇ
ನೀವೆಲ್ಲರೂ ಕೂಡಿ ಬಾಳಿರಿ ಎಂದು

ಆದರೆ… ನಾವೆಲ್ಲೂ ಹೇಳಲಿಲ್ಲ ನಮ್ಮನು
ದೇವರಂತೆ ಇಟ್ಟು ಪೂಜೆ ಮಾಡಿರೆಂದು

ನಾವೆಲ್ಲೂ ಹೇಳಲಿಲ್ಲ ನಮಗಾಗಿ ನೀವು
ಗುಡಿ ಗುಂಡಾರ ಮಸೀದಿ ಚರ್ಚ್ ಬಸದಿ ಕಟ್ಟಿರೆಂದು

ನಾವೆಲ್ಲೂ ಹೇಳಲಿಲ್ಲ ಆರಾಧಿಸುವ ಭರದಲಿ
ನೀವು ನೀವೇ ಕಿತ್ತಾಡಿ ಸಾಯಿರಿ ಎಂದು

ಅದೇಕೋ…. ಜನರೆ ನೀವು ಈ ರೀತಿಯಲ್ಲಿ
ಬದುಕು ನಡೆಸುತ್ತಿರುವಿರಿ ನಮಗೇನೂ ತಿಳಿಯದು

ನಾವೆಲ್ಲರೂ ದೇವರಲ್ಲ ನಿಮ್ಮಂತೆ ಮಾನವರು
ನಮಗಾಗಿ ನೀವು ಜೀವ ಕೊಡ ಬೇಕು ಏಕೆ?

ಜಗದ ಸೃಷ್ಟಿಗೆ ಕಾರಣನಾದ ದೇವರು ಯಾರೆಂದು
ನಮಗೇ ಇನ್ನೂ ತಿಳಿದಿಲ್ಲ

ನಮ್ಮನ್ನು ದೇವರಂತೆ ಮೂರ್ತಿ ಮಾಡಿ ಪೂಜೆ
ಮಾಡುವುದು ನಮಗೆ ಬೇಕಿಲ್ಲ

ನಮ್ಮೆಲ್ಲರ ಆಸೆ ಒಂದೇ ಮಾನವತೆಯ ಅರಿತು ಬಾಳಿರಿ
ಸುಖ ಸಮೃದ್ಧಿಯ ಬಾಳು ನಿಮ್ಮದಾಗಿರಲಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...