Home / ಕವನ / ಕವಿತೆ / ಮಹಾನಗರ ರಸ್ತೆ – ಮರುಚೇತನ

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...