Home / ಕವನ / ಕವಿತೆ / ಮಹಾನಗರ ರಸ್ತೆ – ಮರುಚೇತನ

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ