Home / ಕವನ / ಕವಿತೆ / ಮಹಾನಗರ ರಸ್ತೆ – ಮರುಚೇತನ

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...