Home / ಕವನ / ಕವಿತೆ / ಮಹಾನಗರ ರಸ್ತೆ – ಮರುಚೇತನ

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...