ಭಸ್ಮಾಸುರ

ಸ್ಥಿತಿ:
ಹಾಳೂರ ಹದ್ದುಗಳೆಲ್ಲ ಹಕ್ಕುಪುಕ್ಕ ಬಿಚ್ಚಿ
ಸ್ಮಶಾನದಲ್ಲಿ ಸಂವಿಧಾನಾರ್ಚನೆ; ಬಡಪಾಯಿಗಳ
ಚಟ್ಟ ಸಾಲು ಸಾಲು.
ಇದ್ದ ನಾಲ್ಕು ಗಜ ಜಾಗದಲ್ಲಿ ಮದಗಜಗಳ
ಪಾಲು ಮೂರು ಮುಕ್ಕಾಲು

ಕಾರಣ:
ಹಚ್ಚಹಸಿರು ಕಳಕಳ ಎನ್ನುತ್ತಿದ್ದಾ ಕಾಲದಲ್ಲಿ ಉಬ್ಬಿ
ಸಂವಿಧಾನಶಿವ ಕೊಟ್ಟುಬಿಟ್ಟ ವರ
ಅಸುರನಿಗೆ ಅವಸರ.

ಪರಿಣಾಮ:
ಉಬ್ಬಿನಲಿ ಉಬ್ಬಾಗಿ ಪೆನ್ನಿನಿಂಕೆಲ್ಲ ಮುಗಿಸಿ ತಬ್ಬಿಬ್ಬಾಗಿ
ಕೈಬಾತುಕೊಂಡು ಕಣ್ ಕಣ್ ಬಿಡುವ ಕಲ್ಲಿನಾಥ!
ವರ ಪಡೆದ ಭಸ್ಮಾಸುರನ ಭಂಡ ನಾಟ್ಯದ ತುಳಿತಕ್ಕೆ
ಹಸಿರ ಬಸಿರೊಡೆದ ಕೆಂಪುಕಾವ್ಯ!

ಮುಂದೆ:
ಬರೀ ಗೋಣು ಹಾಕುತ್ತ ಅಪ್ಪನ ಆಲಕ್ಕೆ ನೇಣು ಹಾಕಿಕೊಳ್ಳುತ್ತ
ಕಂಠಪಾಠದ ಭಂಟರಾಗುವ ಅಂಟುರೋಗ
ಇನ್ನಾದರೂ ಸಾಕಪ್ಪ ಸಾಕು.
ವಿಚಾರಮೋಹಿನಿಯ ಮೋಹಕನಾಟ್ಯ ಮಣ್ಣಮಿಡಿತಕ್ಕೆ
ತಕ್ಕಂತೆ ನಡೆಯಬೇಕು.
ಲಾಯಕ್ಕಾದ ಇಂಕು ಒಗ್ಗುವೌಷಧಿಹಾಕಿ ವಾಸ್ತವ್ಯದ
ಹೊಸ ಜೀವ ತುಂಬಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬ್ರೇಕ್ಟನ The Caucasian Chalk Circle
Next post ಸಸ್ಯ ಕಾಸಿಯ ಮ್ಯೂಸಿಯಂ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…