Home / ಲೇಖನ / ಇತರೆ / ಒಂದು ಒಳ್ಳೆಯ ಪೊರಕೆ !

ಒಂದು ಒಳ್ಳೆಯ ಪೊರಕೆ !

ಪ್ರಿಯ ಸಖಿ,
ಇಂದು
ನಮ್ಮ ದೇಶದ
ಬಹು ಮುಖ್ಯ ಅರಕೆ
ಒಂದು
ಒಳ್ಳೆಯ ಪೊರಕೆ !
ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು. ಈ ಪುಟ್ಟ ಪದ್ಯದಲ್ಲಿ ಎಷ್ಟೊಂದು ಅರ್ಥ ತುಂಬಿದೆಯೆಲ್ಲವೇ ಸಖೀ?

ಇಂದು ದೇಶದ ತುಂಬೆಲ್ಲಾ ಭ್ರಷ್ಟಾಚಾರ, ಲಂಚಗುಳಿತನ, ಜಾತೀಯತೆ, ಸ್ವಾರ್ಥ ರಾಜಕಾರಣ, ಅನಕ್ಷರತೆ, ಮೌಢ್ಯ, ಪರಸ್ಪರ ಕಚ್ಚಾಟ…. ಇತ್ಯಾದಿ ಏನೆಲ್ಲಾ ಕಸಗಳು ತುಂಬಿ ಹೋಗಿವೆ. ಇವಗಳ ಜೊತೆಗಿದ್ದು ನಾವೂ ಇದರಲ್ಲಿ ಒಂದಾಗಿ ಹೋಗಿದ್ದೇವೆ. ದೇಶದ ಪರಿಸ್ಥಿತಿಯ ಬಗೆಗೆ ಆಗೀಗ ಗೊಣಗುಟ್ಟಿಕೊಂಡರೂ ‘ನಮ್ಮೊಬ್ಬರಿಂದ ಏನು ಸಾಧ್ಯ’ ಎಂದು ಸಮಜಾಯಿಷಿ ಮಾಡಿಕೊಂಡು ಬಿಡುತ್ತೇವೆ. ‘ದೇಶದ ಕುರಿತು ನನಗೇನು’ ಎಂದು ಜನ ನಿರ್ಲಕ್ಷ ತೋರಲಾರಂಭಿಸಿದರೆ ಆ ದೇಶಕ್ಕೆ ಭವಿಷ್ಯವೇ ಇಲ್ಲ ಎನ್ನುತ್ತಾನೆ ರೂಸೋ.

ಈ ಕಸವನ್ನು ಗುಡಿಸಲು ಎಲ್ಲಿಂದಲಾದರೂ ಯಾರಾದರೂ ಪ್ರಾರಂಭಿಸಲೇ ಬೇಕಲ್ಲವೇ? ಅದಕ್ಕೆ ಬೇಕಿರುವುದು ಒಂದು ಒಳ್ಳೆಯ ಪೊರಕೆ ಎಂದಿದ್ದಾರೆ ಕವಿ. ಹಾಗಾದರೆ ಆ ಪೊರಕೆ ಯಾವುದು? ನನಗನ್ನಿಸುವುದು ಬಹುಶಃ ‘ಜಾಗೃತಿ’ ಎಂಬ ಪೊರಕೆಯೇ ಇದಕ್ಕೆ ಉತ್ತರ. ಜಾಗೃತಿ ಎಂಬ ಪೊರಕೆಗೆ ಶಿಕ್ಷಣ, ದೇಶಪ್ರೇಮ, ವೈಚಾರಿಕ ಪ್ರಜ್ಞೆ ನಿಸ್ವಾರ್ಥತೆ, ವಿವೇಚನೆ, ನಂಬಿಕೆ, ಶ್ರದ್ಧೆ, ಆತ್ಮಸ್ಥೈರ್ಯ….. ಇತ್ಯಾದಿ ಪೊರಕೆ ಕಡ್ಡಿಗಳೇ ಬಲ! ಇಂತಹ ನೂರಾರು ಕಡ್ಡಿಗಳು ಸೇರಿ ತಾನೆ ‘ಜಾಗೃತಿ’ ಎಂಬ ಒಂದು ಪೊರಕೆಯಾಗುವುದು?

ನಿಜಕ್ಕೂ ನಾವು ಈಗ ಮಾಡಬೇಕಿರುವುದು ಇಂತಹ ಪೊರಕೆ ಕಡ್ಡಿಗಳ ಸೃಷ್ಟಿ. ಇದು ಸುಲಭವೂ ಅಲ್ಲ. ಅಸಾಧ್ಯವೂ ಅಲ್ಲ! ಮಾನವ ಮನಸ್ಸು ಮಾಡಿದರೆ ಯಾವುದು ತಾನೇ ಸಾಧ್ಯವಿಲ್ಲ? ಎಲ್ಲಕ್ಕೂ ಮುಖ್ಯವಾಗಿ ಮನಸ್ಸು ಮಾಡಬೇಕಷ್ಟೇ! ದಿಟ್ಟ ಮನಸ್ಸಿನಿಂದ ಪುಟ್ಟ ಹೆಜ್ಜೆ ಇಡುತ್ತಲೇ ಇಂತಹ ಪೊರಕೆ ಕಡ್ಡಿಗಳನ್ನು ಸೃಷ್ಟಿಸಿದರೆ ಪೊರಕೆ ತಾನಾಗಿ ಎಲ್ಲ ಕಡೆಯಿಂದಲೂ ಏಳುತ್ತದೆ. ತಾನೇ ಕಸಗುಡಿಸುತ್ತದೆ. ಸ್ವಚ್ಚ ಮಾಡುತ್ತದೆ. ಇಂತಹ ಒಂದು ಒಳ್ಳೆಯ ಪೊರಕೆಗಾಗಿ ಒಂದು ಪೊರಕೆ ಕಡ್ಡಿಯನ್ನಾದರೂ ಸೃಷ್ಟಿಸುವುವಕ್ಕೆ ನಾವು ಪ್ರಯತ್ನಿಸಿದರೆ ಅದಕ್ಕಿಂತಾ ಒಳ್ಳೆಯ ಕೆಲಸ ಇನ್ನಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...