Home / ಕವನ / ಕವಿತೆ / ಸಿದ್ಧತೆ

ಸಿದ್ಧತೆ

ಭಾರಿ ಭಾರಿ ಬದುಕಬೇಕೆಂದು ಬಾವಿ ತೆಗೆಯಲು ಹೋದೆ
ಗುದ್ದಲಿ ಹಿಡಿದು ಜಜ್ಜುಗಲ್ಲೆಲ್ಲ ತೆಗೆದೆ
ಅಗೆಯುತ್ತ ಅಗೆಯುತ್ತ
ಹೋದೆ;
ತಡೆಯೊಡ್ಡುವ ಬಂಡೆಗಳಿಗೆ ಡೈನಮೆಂಟಾದೆ
ಇಳಿಯುತ್ತ ಇಳಿಯುತ್ತ
ಇಳಿದೆ.


ನಿಯತ್ತಿನ ನೇಗಿಲ
ಯೋಗಿ
ಯಾಗಿ
ಬೀಜ ಬಿತ್ತಿ ನೀರು ಎತ್ತಿ
ಪ್ರಾಮಾಣಿಕ ಪೈರು
ಬೆಳೆಯುವ ಹೊತ್ತಿಗೆ
ಗೊಬ್ಬರಗೋಡು
ಎಂದು ಪಟ್ಟ ಪಾಡು
ಹಾಡಾಗಿ ಹರಿಯುತ್ತಿತ್ತು
ಹೊಲ ಹೊನ್ನುಟ್ಟು
ಅಕ್ಷತೆಯ ಅಂದದಲ್ಲಿ
ದಾಳಿಂಬೆಯುಬ್ಬು ಹೊಮ್ಮುತ್ತಿತ್ತು.


ಬರಬರುತ್ತ ಬಿಸಿಲ ಮೊಳೆ ಬಡಿತ
ನೀರು ಎತ್ತಲು ಹೋದಾಗ ಮತ್ತೆ ಮತ್ತೆ
ಕೈಕೊಡುವ ಕರೆಂಟು ಕೆನೆತ. ಮೀಸೆ ತಿರುವುತ್ತಿರುವಾಗ
ಕೆಳ ಹೊಲಗಳಲ್ಲಿ ಎದ್ದ ಹತ್ತೆಂಟು ಬಾವಿಗಳು
ಮೀಸೆ ತಿರುವುತ್ತಿರುವಾಗ
ನನ್ನ ಬಾವಿ ಬರಿದೇ ಬರಿದು!
ರಕ್ತ ಬಸಿದು ಹಸಿರಾದ ಹೊಲ
ಹೂ ಇಳಿಸಿ ಅಕ್ಷತೆ ಅಳಿಸಿ
ಕುಂಕುಮ ಕೆಡಿಸಿ
ಬಳೆ ಜಜ್ಜಿ ಬಯಲಾಗುತ್ತಿತ್ತು
ಅರ್ಥವಾಗದ ಆವರಣ ರಣರಣವೆನ್ನುತ್ತಿತ್ತು.


ಮಹಾಶಯರೆ
ಹಿಡಿದ ಗುದ್ದಲಿ ಬಿಡುವುದಿಲ್ಲ
ನಾನು
ಹುಟ್ಟಿದ್ದಕ್ಕೆ ನಿಮಗೆ ತೊಂದರೆಯ ತಂತಿ
ತಗುಲಿ ತಲ್ಲಣವಾಗದಿರಲೆಂದು
ನಾನೇ
ಆರೂ ಮೂರಡಿಯ ಗುಂಡಿ
ತೆಗೆಯುತ್ತೇನೆ
ಇಟ್ಟಿಗೆ ಸುಟ್ಟು ಚಟ್ಟ ಕಟ್ಟಿ
ಇಟ್ಟಿರುತ್ತೇನೆ
ನೆರಳಿಗೆಂದು ಗುಂಡಿಯ ಬಳಿ
ಸಸಿಯೊಂದ ನೆಟ್ಟಿರುತ್ತೇನೆ
ಇರುವವರೆಗೆ ನೆಟ್ಟಗಿರುತ್ತೇನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...