Home / ಕವನ / ಕವಿತೆ / ಸಿದ್ಧತೆ

ಸಿದ್ಧತೆ

ಭಾರಿ ಭಾರಿ ಬದುಕಬೇಕೆಂದು ಬಾವಿ ತೆಗೆಯಲು ಹೋದೆ
ಗುದ್ದಲಿ ಹಿಡಿದು ಜಜ್ಜುಗಲ್ಲೆಲ್ಲ ತೆಗೆದೆ
ಅಗೆಯುತ್ತ ಅಗೆಯುತ್ತ
ಹೋದೆ;
ತಡೆಯೊಡ್ಡುವ ಬಂಡೆಗಳಿಗೆ ಡೈನಮೆಂಟಾದೆ
ಇಳಿಯುತ್ತ ಇಳಿಯುತ್ತ
ಇಳಿದೆ.


ನಿಯತ್ತಿನ ನೇಗಿಲ
ಯೋಗಿ
ಯಾಗಿ
ಬೀಜ ಬಿತ್ತಿ ನೀರು ಎತ್ತಿ
ಪ್ರಾಮಾಣಿಕ ಪೈರು
ಬೆಳೆಯುವ ಹೊತ್ತಿಗೆ
ಗೊಬ್ಬರಗೋಡು
ಎಂದು ಪಟ್ಟ ಪಾಡು
ಹಾಡಾಗಿ ಹರಿಯುತ್ತಿತ್ತು
ಹೊಲ ಹೊನ್ನುಟ್ಟು
ಅಕ್ಷತೆಯ ಅಂದದಲ್ಲಿ
ದಾಳಿಂಬೆಯುಬ್ಬು ಹೊಮ್ಮುತ್ತಿತ್ತು.


ಬರಬರುತ್ತ ಬಿಸಿಲ ಮೊಳೆ ಬಡಿತ
ನೀರು ಎತ್ತಲು ಹೋದಾಗ ಮತ್ತೆ ಮತ್ತೆ
ಕೈಕೊಡುವ ಕರೆಂಟು ಕೆನೆತ. ಮೀಸೆ ತಿರುವುತ್ತಿರುವಾಗ
ಕೆಳ ಹೊಲಗಳಲ್ಲಿ ಎದ್ದ ಹತ್ತೆಂಟು ಬಾವಿಗಳು
ಮೀಸೆ ತಿರುವುತ್ತಿರುವಾಗ
ನನ್ನ ಬಾವಿ ಬರಿದೇ ಬರಿದು!
ರಕ್ತ ಬಸಿದು ಹಸಿರಾದ ಹೊಲ
ಹೂ ಇಳಿಸಿ ಅಕ್ಷತೆ ಅಳಿಸಿ
ಕುಂಕುಮ ಕೆಡಿಸಿ
ಬಳೆ ಜಜ್ಜಿ ಬಯಲಾಗುತ್ತಿತ್ತು
ಅರ್ಥವಾಗದ ಆವರಣ ರಣರಣವೆನ್ನುತ್ತಿತ್ತು.


ಮಹಾಶಯರೆ
ಹಿಡಿದ ಗುದ್ದಲಿ ಬಿಡುವುದಿಲ್ಲ
ನಾನು
ಹುಟ್ಟಿದ್ದಕ್ಕೆ ನಿಮಗೆ ತೊಂದರೆಯ ತಂತಿ
ತಗುಲಿ ತಲ್ಲಣವಾಗದಿರಲೆಂದು
ನಾನೇ
ಆರೂ ಮೂರಡಿಯ ಗುಂಡಿ
ತೆಗೆಯುತ್ತೇನೆ
ಇಟ್ಟಿಗೆ ಸುಟ್ಟು ಚಟ್ಟ ಕಟ್ಟಿ
ಇಟ್ಟಿರುತ್ತೇನೆ
ನೆರಳಿಗೆಂದು ಗುಂಡಿಯ ಬಳಿ
ಸಸಿಯೊಂದ ನೆಟ್ಟಿರುತ್ತೇನೆ
ಇರುವವರೆಗೆ ನೆಟ್ಟಗಿರುತ್ತೇನೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...