Home / ಕವನ / ಕವಿತೆ / ಅನಾಥ

ಅನಾಥ


ನಿಜ ಮಾರಾಯರೆ
ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ
ಹುಟ್ಟಿದವ ನಾನಲ್ಲ;
ಅಂಥ ದೌರ್ಭಾಗ್ಯ ನನ್ನದಲ್ಲ.
ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು
ಬುಗುಬುಗು ಬಂಡಿ ಬಿಡುವವನಲ್ಲ;
ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ
ಸಂದಿಮನ ನನಗಿಲ್ಲ.

ನ್ಯಾಯ ಬುತ್ತಿಕಟ್ಟಿ ನೆತ್ತಿ ಮೇಲಿಟ್ಟುಕೊಂಡ
ನಕ್ಕಿ ಮುಖದ ಮಾರಾಯರೆ
ಮತ್ತೆಮತ್ತೇಕೆ ಎಳೆಯುವಿರಿ ಕಬ್ಬಿಣದ ಮೈಮೇಲೆ
ದಬ್ಬಳದ ಬರೆ?
ನನಗೆ ನೆನಪಿದೆ: ನಾನು ನಿಮ್ಮವನಲ್ಲ
ನಿಮ್ಮ ಹಳೆ ಆಸ್ತಿ ಅಸ್ಥಿ ನನಗೆ ಬೇಕಿಲ್ಲ
ಬುರುಗು ಬುದ್ಧಿ ನನ್ನದಲ್ಲ.

ಒಂದು ವೇಳೆ
ನಿಮ್ಮ ಏರ್‌ಕಂಡೀಷನ್ಡ್ ಮನೆಯಲ್ಲಿ ಹುಟ್ಟಿದ್ದರೆ
ಜಂಗಿಸಿದರೂ ಜಗ್ಗದ ದೊಡ್ಡ ಗೋಡೆಯ
ಗೂಡೆವನದಲ್ಲಿ ನನ್ನ ಸಾಕಿದ್ದರೆ
ಲಂಗರು ಹಾಕಿ ನೀವು ನಿಂತಿದ್ದರೆ
ಜುಟ್ಟು ಜುಟ್ಟಿಗೆ ಜೋಲಿ ಕಟ್ಟಿ
ಕೆಂಪು ಕಹಳೆಯೂದುತ್ತಿದ್ದೆ.
ನಿಮ್ಮ ಗಟಾರಿನ ಮುಂದೆ ಗುಟುರು ಹಾಕುತ್ತಿದ್ದೆ.
ಬೆಲೆಯಿಲ್ಲದ ಎಲೆಗಳಿಗೆ ಕೊಳೆತ ಕಸಕಡ್ಡಿ ಗುಡ್ಡೆಗಳಿಗೆ
ಸುಂಟರಗಾಳಿಯ ಹಂಟರಾಗುತ್ತಿದ್ದೆ:
ನಾನು ನಾನೇ ಆಗುತ್ತಿದ್ದೆ.


ನಿಮಗೂ ಅಷ್ಟೆ ಮಾರಾಯರೆ
ನನ್ನನ್ನು ನಿಮ್ಮವನು ಎಂದುಕೊಂಡವರೆ
ನನ್ನ ಬಾಳಿನ ಸುತ್ತ ಬೇಲಿ ಕಟ್ಟುವವರೆ
ಬೇಸಿಗೆಯಲ್ಲೇ ನಿಮ್ಮ ವರ್ಷವೃಷ್ಟಿ!
ಬಂಜೆಬಾನಿಂದ ಪುಷ್ಪವೃಷ್ಟಿ!
ನೀವು ಹಾಕುವ ಹಾರ ಬಲು ಭಾರ ಸ್ವಾಮಿ
ನಡೆಯಲಾರೆ ನಾನು ತಡೆಯಲಾರೆ
ಅಲ್ಲಿ ಕರೆಯುವ ಆ ಕೆಂಪು ಕಂಗಳ ಬಿಟ್ಟು
ತಣ್ಣನೆಯ ತಂಗಳನು ತಿನ್ನಲಾರೆ.
ನಿಮ್ಮವರಾದ ನನ್ನ ಅಪ್ಪ ಅಮ್ಮನ ಖುಷಿಯ
ಕಂದನಾದದ್ದು ನನ್ನ ತಪ್ಪಲ್ಲ;
ನಾನು ನಿಮ್ಮವನೂ ಅಲ್ಲ.


ಹೊರಟೆ;
ಭೂತಬಾಯಿಗೆ ಬಿರಟೆ
ಹೊಡೆದು ಹೊರಟೆ
ಕಳ್ಳು ಕುಡಿದು ಕಾಡಿಸುವ ಕೊಳ್ಳಿದೆವ್ವಗಳಿಗೆ ದಕ್ಕದೆ
ದಮ್ಮು ಕಟ್ಟಿ ಹೊರಟೆ.
ಮರಳು ನೆಲದಲ್ಲಿ ದೈತ್ಯ ನೆರಳು
ಗೋಮಾಳೆ ಹಿಚುಕುವ ಭೂತ ಬೆರಳು
ಅಡ್ಡ ಹಳಿಗಳ ಮೇಲೆ ಚಕ್ರದುರುಳು.
ಕೊರಳ ಕೊಡದೆ ಕ್ಷಣಮಾತ್ರ ಕಂಪಿಸದೆ
ನನ್ನವರ ನಾನು ಹುಡುಕಿ ಹೊರಟೆ

ಅಲ್ಲೊಂದು ಇಲ್ಲೊಂದು ನನ್ನವೇ ಮುಖ ಕಂಡು
ಮುಂಬಾಗಿಲ ಮುಗುಳ್ನಗೆಯಲ್ಲಿ ಮೈಮರೆತು
ಅದು ಹುಣ್ಣಿಮೆ ಹೊತ್ತು!
ಕ್ಷಣ ಕಳೆದು ಕಣ್ಣು ಬಿಟ್ಟರೆ ಅಯ್ಯೋ! ಕಗ್ಗತ್ತಲು!
ನಗ್ನಕಪ್ಪಿನಲ್ಲಿ ವಿಕಟ ನಗೆ ಎತ್ತಲು.
ಬಾಯ್ತೆಗೆದ ಭೂತಭೂಮಿಯ ಕೋರೆದಾಡೆಗಳಂತೆ ಕೊಳ್ಳಿ-
ಕುಣಿತ.
ನುಗ್ಗಲೇಬೇಕೆಂಬ ನೊಗ ಹೊತ್ತು ನಿಂತ ನಾನು
ಅನಾಥ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...