Home / ಕವನ / ಕವಿತೆ / ಅನಾಥ

ಅನಾಥ


ನಿಜ ಮಾರಾಯರೆ
ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ
ಹುಟ್ಟಿದವ ನಾನಲ್ಲ;
ಅಂಥ ದೌರ್ಭಾಗ್ಯ ನನ್ನದಲ್ಲ.
ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು
ಬುಗುಬುಗು ಬಂಡಿ ಬಿಡುವವನಲ್ಲ;
ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ
ಸಂದಿಮನ ನನಗಿಲ್ಲ.

ನ್ಯಾಯ ಬುತ್ತಿಕಟ್ಟಿ ನೆತ್ತಿ ಮೇಲಿಟ್ಟುಕೊಂಡ
ನಕ್ಕಿ ಮುಖದ ಮಾರಾಯರೆ
ಮತ್ತೆಮತ್ತೇಕೆ ಎಳೆಯುವಿರಿ ಕಬ್ಬಿಣದ ಮೈಮೇಲೆ
ದಬ್ಬಳದ ಬರೆ?
ನನಗೆ ನೆನಪಿದೆ: ನಾನು ನಿಮ್ಮವನಲ್ಲ
ನಿಮ್ಮ ಹಳೆ ಆಸ್ತಿ ಅಸ್ಥಿ ನನಗೆ ಬೇಕಿಲ್ಲ
ಬುರುಗು ಬುದ್ಧಿ ನನ್ನದಲ್ಲ.

ಒಂದು ವೇಳೆ
ನಿಮ್ಮ ಏರ್‌ಕಂಡೀಷನ್ಡ್ ಮನೆಯಲ್ಲಿ ಹುಟ್ಟಿದ್ದರೆ
ಜಂಗಿಸಿದರೂ ಜಗ್ಗದ ದೊಡ್ಡ ಗೋಡೆಯ
ಗೂಡೆವನದಲ್ಲಿ ನನ್ನ ಸಾಕಿದ್ದರೆ
ಲಂಗರು ಹಾಕಿ ನೀವು ನಿಂತಿದ್ದರೆ
ಜುಟ್ಟು ಜುಟ್ಟಿಗೆ ಜೋಲಿ ಕಟ್ಟಿ
ಕೆಂಪು ಕಹಳೆಯೂದುತ್ತಿದ್ದೆ.
ನಿಮ್ಮ ಗಟಾರಿನ ಮುಂದೆ ಗುಟುರು ಹಾಕುತ್ತಿದ್ದೆ.
ಬೆಲೆಯಿಲ್ಲದ ಎಲೆಗಳಿಗೆ ಕೊಳೆತ ಕಸಕಡ್ಡಿ ಗುಡ್ಡೆಗಳಿಗೆ
ಸುಂಟರಗಾಳಿಯ ಹಂಟರಾಗುತ್ತಿದ್ದೆ:
ನಾನು ನಾನೇ ಆಗುತ್ತಿದ್ದೆ.


ನಿಮಗೂ ಅಷ್ಟೆ ಮಾರಾಯರೆ
ನನ್ನನ್ನು ನಿಮ್ಮವನು ಎಂದುಕೊಂಡವರೆ
ನನ್ನ ಬಾಳಿನ ಸುತ್ತ ಬೇಲಿ ಕಟ್ಟುವವರೆ
ಬೇಸಿಗೆಯಲ್ಲೇ ನಿಮ್ಮ ವರ್ಷವೃಷ್ಟಿ!
ಬಂಜೆಬಾನಿಂದ ಪುಷ್ಪವೃಷ್ಟಿ!
ನೀವು ಹಾಕುವ ಹಾರ ಬಲು ಭಾರ ಸ್ವಾಮಿ
ನಡೆಯಲಾರೆ ನಾನು ತಡೆಯಲಾರೆ
ಅಲ್ಲಿ ಕರೆಯುವ ಆ ಕೆಂಪು ಕಂಗಳ ಬಿಟ್ಟು
ತಣ್ಣನೆಯ ತಂಗಳನು ತಿನ್ನಲಾರೆ.
ನಿಮ್ಮವರಾದ ನನ್ನ ಅಪ್ಪ ಅಮ್ಮನ ಖುಷಿಯ
ಕಂದನಾದದ್ದು ನನ್ನ ತಪ್ಪಲ್ಲ;
ನಾನು ನಿಮ್ಮವನೂ ಅಲ್ಲ.


ಹೊರಟೆ;
ಭೂತಬಾಯಿಗೆ ಬಿರಟೆ
ಹೊಡೆದು ಹೊರಟೆ
ಕಳ್ಳು ಕುಡಿದು ಕಾಡಿಸುವ ಕೊಳ್ಳಿದೆವ್ವಗಳಿಗೆ ದಕ್ಕದೆ
ದಮ್ಮು ಕಟ್ಟಿ ಹೊರಟೆ.
ಮರಳು ನೆಲದಲ್ಲಿ ದೈತ್ಯ ನೆರಳು
ಗೋಮಾಳೆ ಹಿಚುಕುವ ಭೂತ ಬೆರಳು
ಅಡ್ಡ ಹಳಿಗಳ ಮೇಲೆ ಚಕ್ರದುರುಳು.
ಕೊರಳ ಕೊಡದೆ ಕ್ಷಣಮಾತ್ರ ಕಂಪಿಸದೆ
ನನ್ನವರ ನಾನು ಹುಡುಕಿ ಹೊರಟೆ

ಅಲ್ಲೊಂದು ಇಲ್ಲೊಂದು ನನ್ನವೇ ಮುಖ ಕಂಡು
ಮುಂಬಾಗಿಲ ಮುಗುಳ್ನಗೆಯಲ್ಲಿ ಮೈಮರೆತು
ಅದು ಹುಣ್ಣಿಮೆ ಹೊತ್ತು!
ಕ್ಷಣ ಕಳೆದು ಕಣ್ಣು ಬಿಟ್ಟರೆ ಅಯ್ಯೋ! ಕಗ್ಗತ್ತಲು!
ನಗ್ನಕಪ್ಪಿನಲ್ಲಿ ವಿಕಟ ನಗೆ ಎತ್ತಲು.
ಬಾಯ್ತೆಗೆದ ಭೂತಭೂಮಿಯ ಕೋರೆದಾಡೆಗಳಂತೆ ಕೊಳ್ಳಿ-
ಕುಣಿತ.
ನುಗ್ಗಲೇಬೇಕೆಂಬ ನೊಗ ಹೊತ್ತು ನಿಂತ ನಾನು
ಅನಾಥ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...