Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...