Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...