ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಲೀ ಮರೀ ಇಲೀ ಮರೀ
Next post ಮಲ್ಲಿಗೆಯ ಮೊಗ್ಗುಗಳ ರಾಸಿ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…