Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...