Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...