Home / ಕವನ / ಕವಿತೆ / ಬೆಂಗಳೂರು ’೭೨

ಬೆಂಗಳೂರು ’೭೨

ಪರಚಿಕೊಂಡ ಪರಿಚಯದ ರಸ್ತೆ
ಉರುಳು
ತ್ತವೆ ಒಂದೇಸಮ ಮೈಮೇಲೆ ಅಟ್ಟಹಾಸದ ಸರಕು
ಬದುಕು ಬಿರುಕು
ಹೊತ್ತು ಗೊತ್ತಿಲ್ಲದೆ ಕತ್ತು ಕುಯ್ಯುತ್ತವೆ
ಪೆಡಸ್ಟ್ರ್‍ಐನಿನಲ್ಲಿ ಪೋಲೀಸನ ಕೈಗೇ ಕೈಕೊಟ್ಟು ನುಗ್ಗುತ್ತವೆ
ಕಾಲ
ಚಕ್ರದ
ಕೆಳಗೆ ಕರುಳ ಕಣ್ಣೊಡೆದು ಕೆಂಪು ಭೂಪಟ
ಬಿಡಿಸುತ್ತವೆ; ಇಲ್ಲಿ ಸಲ್ಲದೆ ಅಲ್ಲಿ ಸಲ್ಲುತ್ತವೆ.

ಇಲ್ಲಿ- ಪ್ರಜಾಪ್ರಭುತ್ವಕ್ಕೆ ಹೆಸರಾದ ಫುಟ್‍ಪಾತಿನಲ್ಲಿ
ಕಾಲುಗಳು ಇಂಟುಮಾರ್ಕು ಹಾಕುತ್ತವೆ ಸತತ.
ಮಧ್ಯೆ ಹರಿಯುವ ಮೀನು ಮೊಸಳೆಗಳ ಹೊಳೆ
-ಯಾಚೆ ದಡಕ್ಕೆ ಮತ್ತಕಣ್ಣು ಮುಕ್ಕಳಿಸಿ ಸುತ್ತುತ್ತವೆ ವೃತ್ತ.
ದಡದಿಂದ ದಡಕ್ಕೆ ಬ್ರಿಡ್ಜು ಕಟ್ಟಿ ನಿಂತಕಡೆಯೆ ಬದುಕಿ
-ನ ಬ್ಯಾಡ್ಜು ಧರಿಸಿ ಕೈಚಾಚಿ ಬರುತ್ತ
ಮಧ್ಯ ಹೊಳೆಯಲ್ಲಿ ತಣ್ಣನೆಯ ನೀರಲ್ಲಿ
ಬೆಚ್ಚನೆಯ ಬಂಧನದಲ್ಲಿ ಮತ್ತೆ
ಚುಂಬನದಲ್ಲಿ ಡೈವೊರ್‍ಸಿಗೆ ಸಹಿಮಾಡುತ್ತವೆ.

ಗುಪ್ತ
ಮಾರ್ಕೆಟ್ಟಿನ ಮುಂದೆ ಸುಪ್ತ ಚಿತ್ತ ಬಿಚ್ಚುತ್ತವೆ
ಅತ್ತ ಇತ್ತ ಸುತ್ತಮುತ್ತ ಮೆಲುಕುತ್ತ
ಆ ಈ ಭಾಷೆಗಳ ಕ್ರಾಸ್ ಬ್ರೀಡಿನಲ್ಲಿ
ಹೊಸದೊಂದು ಹುಟ್ಟಿಸುತ್ತವೆ; ಕಿವಿಬೆದರಿಸುತ್ತವೆ
ಅಲಂಕಾರದಲ್ಲಿ ಮುಳುಗಿ ಕಲ್ಪನಾಕ್ಕೆ ಪ್ರಭಾತ್ ಭೇರಿಹಾಕಿ
ಮೇನಕಾ ಮೈಯಲ್ಲಿ ಬಾಳು ಬರೆಯುತ್ತ
ಹಿಮಾಲಯ ಹತ್ತುತ್ತವೆ; ಹಡೆಯುತ್ತವೆ.

ಇಲ್ಲಿ ಈ ಸಿಟಿ
ಮಾರ್ಕೆಟ್ಟಿನಲ್ಲಿ ಮೀನುಬಲೆ ಮಾತು
ಬಿಡಿಸಲಾಗದ ಜಟಿಲತೆ ಜಂಜಾಟ ಜೀಕು
ಅಮಾವಾಸ್ಯೆಯಲ್ಲಿ ಬೆಳದಿಂಗಳ ಬಯಕೆ
ಬೆನ್ನಮೇಲೆ ಹೊತ್ತು ಬೆವರು ಬಸಿಯುತ್ತವೆ.
ಬಿಡುವು ಸಿಕ್ಕಾಗ ಸಿಳ್ಳು ಸಂಭ್ರಮದಲ್ಲಿ ಬಣ್ಣಕ್ಕೆ ಕಣ್ಣು
ಕೆನೆಸುತ್ತ ಕಳ್ಳು ಕುಡಿಯುತ್ತವೆ; ಸ್ವರ್ಗದ ಬಾಗಿಲಿಗೆ ಡಿಕ್ಕಿ
ಹೊಡೆದು ದುಡುಮ್ಮನೆ ಬೀಳುತ್ತವೆ.
ಸಿಳ್ಳು ಕಳ್ಳುಗಳ ದಡದಲ್ಲಿ ಮಾಮೂಲು ಮುಳ್ಳುಗಳು
ಬಿಲದಲ್ಲಿದ್ದು ನೆಲದ ನೈಜವಾಸನೆ ಕುಡಿತ ಕಡಿತಗಳು
ಬಾಯಿಗೆ ಬೆಣೆ ಬಡಿಸಿಕೊಂಡು ಬಂಡೆ ಸಂದಿಯಲ್ಲೂ ಬದುಕು
ಬಿಕ್ಕುತ್ತವೆ; ಬರೆಯುತ್ತವೆ.
‘ಅವು ಇವು’ಗಳ ಬದಲು ‘ಅವರು ಇವರು’ ಆಗಲು ಒದ್ದಾಡುತ್ತವೆ
ಇವು ಕೊಳಚೆ ಕಾವ್ಯದ ನಾಯಕ ನಾಯಕಿಯರು.
ನರನರಕ್ಕೆ ಬರದ ಬರೆ ಬಿದ್ದು ಬೆಣೆಯೆದ್ದು
ಬಾಯಿ ಬಿಟ್ಟರೆ ಸಾಕು
ಮೂರಂತಸ್ತಿನ ತುಟ್ಟ ತುದಿಯಲ್ಲಿ ವಾಯುವಿಹಾರದಲ್ಲಿ
‘ಅವು’
ಸ್ಲೋ-ಗನ್ನುಗಳ ಗೋಡನ್ನು ತೋರಿಸಿ ಕೋಟೆ ಕಟ್ಟುತ್ತವೆ.
‘ಇವರು’
ಹತ್ತಲು ಉಡವಾಗುತ್ತಾರೆ; ಉಡ ಬಡವಾಗುತ್ತದೆ.
ಇಷ್ಟಿಷ್ಟೇ ಹಿಡಿತ ಇಲ್ಲವಾಗುತ್ತ
ಅರ್ಥ ಹುಡುಕುತ್ತ ಹುಡುಕುತ್ತ ನೆಲವಾಗುತ್ತದೆ.

ಎಲೆಕ್ಟ್ರಿಸಿಟಿ ಬೋರ್ಡು ಅದರದೇ ಹತ್ತಾರು ವಾರ್ಡು
ಇರುವ ಬೆಳ್ಳಂಬೆಳಗಿನ ಬೆಂಗಳೂರಲ್ಲಿ
ಏನು ಮಾಡುವುದು ಸ್ವಾಮಿ ತಂತಿ ಕತ್ತರಿಸುತ್ತದೆ ಇಲ್ಲ ಕಂಬ ಬೀಳುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...