Home / ಕವನ / ಕವಿತೆ / ಬೆಂಗಳೂರು ’೭೨

ಬೆಂಗಳೂರು ’೭೨

ಪರಚಿಕೊಂಡ ಪರಿಚಯದ ರಸ್ತೆ
ಉರುಳು
ತ್ತವೆ ಒಂದೇಸಮ ಮೈಮೇಲೆ ಅಟ್ಟಹಾಸದ ಸರಕು
ಬದುಕು ಬಿರುಕು
ಹೊತ್ತು ಗೊತ್ತಿಲ್ಲದೆ ಕತ್ತು ಕುಯ್ಯುತ್ತವೆ
ಪೆಡಸ್ಟ್ರ್‍ಐನಿನಲ್ಲಿ ಪೋಲೀಸನ ಕೈಗೇ ಕೈಕೊಟ್ಟು ನುಗ್ಗುತ್ತವೆ
ಕಾಲ
ಚಕ್ರದ
ಕೆಳಗೆ ಕರುಳ ಕಣ್ಣೊಡೆದು ಕೆಂಪು ಭೂಪಟ
ಬಿಡಿಸುತ್ತವೆ; ಇಲ್ಲಿ ಸಲ್ಲದೆ ಅಲ್ಲಿ ಸಲ್ಲುತ್ತವೆ.

ಇಲ್ಲಿ- ಪ್ರಜಾಪ್ರಭುತ್ವಕ್ಕೆ ಹೆಸರಾದ ಫುಟ್‍ಪಾತಿನಲ್ಲಿ
ಕಾಲುಗಳು ಇಂಟುಮಾರ್ಕು ಹಾಕುತ್ತವೆ ಸತತ.
ಮಧ್ಯೆ ಹರಿಯುವ ಮೀನು ಮೊಸಳೆಗಳ ಹೊಳೆ
-ಯಾಚೆ ದಡಕ್ಕೆ ಮತ್ತಕಣ್ಣು ಮುಕ್ಕಳಿಸಿ ಸುತ್ತುತ್ತವೆ ವೃತ್ತ.
ದಡದಿಂದ ದಡಕ್ಕೆ ಬ್ರಿಡ್ಜು ಕಟ್ಟಿ ನಿಂತಕಡೆಯೆ ಬದುಕಿ
-ನ ಬ್ಯಾಡ್ಜು ಧರಿಸಿ ಕೈಚಾಚಿ ಬರುತ್ತ
ಮಧ್ಯ ಹೊಳೆಯಲ್ಲಿ ತಣ್ಣನೆಯ ನೀರಲ್ಲಿ
ಬೆಚ್ಚನೆಯ ಬಂಧನದಲ್ಲಿ ಮತ್ತೆ
ಚುಂಬನದಲ್ಲಿ ಡೈವೊರ್‍ಸಿಗೆ ಸಹಿಮಾಡುತ್ತವೆ.

ಗುಪ್ತ
ಮಾರ್ಕೆಟ್ಟಿನ ಮುಂದೆ ಸುಪ್ತ ಚಿತ್ತ ಬಿಚ್ಚುತ್ತವೆ
ಅತ್ತ ಇತ್ತ ಸುತ್ತಮುತ್ತ ಮೆಲುಕುತ್ತ
ಆ ಈ ಭಾಷೆಗಳ ಕ್ರಾಸ್ ಬ್ರೀಡಿನಲ್ಲಿ
ಹೊಸದೊಂದು ಹುಟ್ಟಿಸುತ್ತವೆ; ಕಿವಿಬೆದರಿಸುತ್ತವೆ
ಅಲಂಕಾರದಲ್ಲಿ ಮುಳುಗಿ ಕಲ್ಪನಾಕ್ಕೆ ಪ್ರಭಾತ್ ಭೇರಿಹಾಕಿ
ಮೇನಕಾ ಮೈಯಲ್ಲಿ ಬಾಳು ಬರೆಯುತ್ತ
ಹಿಮಾಲಯ ಹತ್ತುತ್ತವೆ; ಹಡೆಯುತ್ತವೆ.

ಇಲ್ಲಿ ಈ ಸಿಟಿ
ಮಾರ್ಕೆಟ್ಟಿನಲ್ಲಿ ಮೀನುಬಲೆ ಮಾತು
ಬಿಡಿಸಲಾಗದ ಜಟಿಲತೆ ಜಂಜಾಟ ಜೀಕು
ಅಮಾವಾಸ್ಯೆಯಲ್ಲಿ ಬೆಳದಿಂಗಳ ಬಯಕೆ
ಬೆನ್ನಮೇಲೆ ಹೊತ್ತು ಬೆವರು ಬಸಿಯುತ್ತವೆ.
ಬಿಡುವು ಸಿಕ್ಕಾಗ ಸಿಳ್ಳು ಸಂಭ್ರಮದಲ್ಲಿ ಬಣ್ಣಕ್ಕೆ ಕಣ್ಣು
ಕೆನೆಸುತ್ತ ಕಳ್ಳು ಕುಡಿಯುತ್ತವೆ; ಸ್ವರ್ಗದ ಬಾಗಿಲಿಗೆ ಡಿಕ್ಕಿ
ಹೊಡೆದು ದುಡುಮ್ಮನೆ ಬೀಳುತ್ತವೆ.
ಸಿಳ್ಳು ಕಳ್ಳುಗಳ ದಡದಲ್ಲಿ ಮಾಮೂಲು ಮುಳ್ಳುಗಳು
ಬಿಲದಲ್ಲಿದ್ದು ನೆಲದ ನೈಜವಾಸನೆ ಕುಡಿತ ಕಡಿತಗಳು
ಬಾಯಿಗೆ ಬೆಣೆ ಬಡಿಸಿಕೊಂಡು ಬಂಡೆ ಸಂದಿಯಲ್ಲೂ ಬದುಕು
ಬಿಕ್ಕುತ್ತವೆ; ಬರೆಯುತ್ತವೆ.
‘ಅವು ಇವು’ಗಳ ಬದಲು ‘ಅವರು ಇವರು’ ಆಗಲು ಒದ್ದಾಡುತ್ತವೆ
ಇವು ಕೊಳಚೆ ಕಾವ್ಯದ ನಾಯಕ ನಾಯಕಿಯರು.
ನರನರಕ್ಕೆ ಬರದ ಬರೆ ಬಿದ್ದು ಬೆಣೆಯೆದ್ದು
ಬಾಯಿ ಬಿಟ್ಟರೆ ಸಾಕು
ಮೂರಂತಸ್ತಿನ ತುಟ್ಟ ತುದಿಯಲ್ಲಿ ವಾಯುವಿಹಾರದಲ್ಲಿ
‘ಅವು’
ಸ್ಲೋ-ಗನ್ನುಗಳ ಗೋಡನ್ನು ತೋರಿಸಿ ಕೋಟೆ ಕಟ್ಟುತ್ತವೆ.
‘ಇವರು’
ಹತ್ತಲು ಉಡವಾಗುತ್ತಾರೆ; ಉಡ ಬಡವಾಗುತ್ತದೆ.
ಇಷ್ಟಿಷ್ಟೇ ಹಿಡಿತ ಇಲ್ಲವಾಗುತ್ತ
ಅರ್ಥ ಹುಡುಕುತ್ತ ಹುಡುಕುತ್ತ ನೆಲವಾಗುತ್ತದೆ.

ಎಲೆಕ್ಟ್ರಿಸಿಟಿ ಬೋರ್ಡು ಅದರದೇ ಹತ್ತಾರು ವಾರ್ಡು
ಇರುವ ಬೆಳ್ಳಂಬೆಳಗಿನ ಬೆಂಗಳೂರಲ್ಲಿ
ಏನು ಮಾಡುವುದು ಸ್ವಾಮಿ ತಂತಿ ಕತ್ತರಿಸುತ್ತದೆ ಇಲ್ಲ ಕಂಬ ಬೀಳುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...