ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೀತಿ ನೀತಿ
Next post ಹುಡುಗ – ಹುಡುಗಿ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…