Home / ಕವನ / ಕವಿತೆ / ಅಮ್ಮ

ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...