ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೀತಿ ನೀತಿ
Next post ಹುಡುಗ – ಹುಡುಗಿ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…