Home / ಕವನ / ಕವಿತೆ / ಅಮ್ಮ

ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...