Home / ಕವನ / ಕವಿತೆ / ಅಮ್ಮ

ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...