ಒಂಟಿ ದನಿ

ಗಾಯಗೊಂಡ ಗೋಡೆಗಳೇ ಕಾಳುಬೀಳು ಗೂಡೆಗಳೇ
ಒಡೆದ ಮಡಕೆ ಹರಿದ ತಡಿಕೆ ತುಂಬಿನಿಂತ ನಾಡುಗಳೇ
ನಮ್ಮೊಳಗಿನ ಕರುಳ ಮಾತು ಮುಟ್ಟದಿಲ್ಲಿ ಮಂದಿಗೆ
ಬಾಯಾರಿಕೆ ನೋವಿನುರಿ ತಟ್ಟದಿಲ್ಲಿ ನೀರಿಗೆ

ತಿನ್ನುವನ್ನ ನಂಬುತಿಲ್ಲ ಅಪನಂಬಿಕೆ ಅಗುಳು
ತಟ್ಟೆಗಂತು ಹೊಟ್ಟೆ ತುಂಬ ಅವಮಾನದ ಸಿಡಿಲು
ಬಾಯಲಿಟ್ಟ ತುತ್ತೆಮಗೆ ಕುತ್ತಾಯಿತು ನೋಡಿ
ಮಾತಾಡಿರಿ ಇನ್ನಾದರು ಕಟ್ಟು ಕಳಚಿ ನಿಲ್ಲಿರಿ

ನಮ್ಮ ಮೂಳೆ ಪುಡಿಯ ಕಾಂತಿ ಹೊತ್ತು ಹೊಳೆವ ಮುಖಗಳು
ಬೇಡವಾದ ಗಳಿಗೆಯಲ್ಲೆ ಕೆಂಗಣ್ಣಿನ ನಖಗಳು
ನಮ್ಮ ನಗುವ ಮುಖದ ಮರೆಗೆ ಮಚ್ಚಿನೇಟಿನೊಳಗುದಿ
ಹೆಜ್ಜೆಯಿಟ್ಟ ಸಜ್ಜೆಮನೆಯ ಹೂವು ಉರಿದು ಬೂದಿ.

ಮೌನದಲ್ಲಿ ಕೊಲ್ಲಬೇಡಿ ಕರುಣೆ ನಮಗೆ ಬೇಡ
ಲೆಕ್ಕಬುಕ್ಕು ಬೆಳ್ಳಿಕೋಳ ಅಂಕಗಣಿತ ಬೇಡ
ಜೇಡಜಾಲ ಕೊಡವಿ ನಿಲ್ಲಿ ಹೊಸತು ಮಾತು ಮಸೆಯಿರಿ
ಜೀವಗಾಳಿ ಗೆಳೆಯರಾಗಿ ಮೆದುಳು ಮನಸು ಬೆಸೆಯಿರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮ್ಯಾಕ್ಸಿಂ ಗಾರ್ಕಿಯವರ ‘ತಾಯಿ’ – ಒಂದು ಪ್ರತಿಕ್ರಿಯೆ
Next post ಮಾತೃವಾತ್ಸಲ್ಯ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…