Home / ಲೇಖನ / ಇತರೆ / ಪ್ರೀತಿ ಇಲ್ಲದ ಮೇಲೆ

ಪ್ರೀತಿ ಇಲ್ಲದ ಮೇಲೆ

Hrudayaಪ್ರಿಯ ಸಖಿ,
ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ಒಂದು ಮುಖ್ಯ ಕಾರಣ ನೋಡು.

ಪ್ರೀತಿ ಇಲ್ಲದ ಮೇಲೆ
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?

ಕವಿಯ ಭಾವನೆ ಎಷ್ಟೊಂದು ಅರ್ಥಗರ್ಭಿತವಾಗಿದೆಯಲ್ಲವೇ ಸಖಿ? ನಮ್ಮಗಳ ನಡುವೆ ಪ್ರೀತಿ ಇಲ್ಲದಿರುವುದೇ ಈ ಎಲ್ಲ ಅಧೋಗತಿಗೆ ಕಾರಣವಲ್ಲವೇ ಪ್ರೀತಿಯೊಂದಿದ್ದರೆ ಬೇರೆಲ್ಲವನ್ನು ಮಾಫಿ ಮಾಡಬಹುದು ಎಂತಹ ಕಷ್ಟವಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬಹುದು. ಹೃದಯ ವಿಶಾಲವಾಗುತ್ತಾ ಹೋಗಿ ಎಲ್ಲೆಡೆಯೂ ಪ್ರೀತಿಯನ್ನೇ ತುಂಬಬಹುದು. ಆದರೆ ……… ಅದೇ ಇಲ್ಲದಿದ್ದರೇ? ಮನುಷ್ಯನಾಗಿದ್ದು ಏನು ಪ್ರಯೋಜನ?

ಕವನದ ಕೊನೆಯಲ್ಲಿ ಕವಿ ಅತ್ಯಂತ ಮಾರ್ಮಿಕವಾಗಿ ನಮ್ಮ ಮುಂದೆ ಪ್ರಶ್ನೆಗಳನ್ನಿಡುತ್ತಾರೆ.
ಪ್ರೀತಿ ಇಲ್ಲದ ಮೇಲೆ
ಸಂಶಯದ ಗಡಿಗಳುದ್ದಕ್ಕೂ,
ಸಿಡಿಗುಂಡುಗಳ ಕದನ ನಿಂತೀತು ಹೇಗೆ ?
ಜಾತಿಮತಭಾಷೆ ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ ?
ಹೌದಲ್ಲವೇ ಸಖಿ? ಪ್ರೀತಿ-ಸ್ನೇಹಗಳಿಲ್ಲದೇ ನಮ್ಮ ಹೃದಯ ಬೆಂಗಾಡಾಗುವುದನ್ನು ತಪ್ಪಿಸುವದು ಹೇಗೆ? ಬರೀ ಸ್ವಾರ್ಥ, ಸಂಕುಚಿತ ಮನೋಭಾವ, ದ್ವೇಷ, ಅಸೂಯೆಗಳನ್ನೇ ತುಂಬಿಕೊಂಡು ಬರಡಾಗುತ್ತಿರುವ ನಮ್ಮೆಲ್ಲರ ಹೃದಯಗಳಲ್ಲೂ ಪ್ರೀತಿಯು ಚಿಗುರೊಡೆಯಬೇಕು. ಮರವಾಗಿ ಬೆಳೆಯಬೇಕು. ದಿಗಂತಕ್ಕೇರಿ ನಿಂತು ವಿಶ್ವವ್ಯಾಪಿಯಾಗಬೇಕು. ಆಗ ನಾವೆಲ್ಲರೂ ನಿಜವಾದ ಅರ್ಧದಲ್ಲಿ ಮಾನವರಾಗುತ್ತೇವೆ. ಇಲ್ಲದಿದ್ದರೆ ಭಾವನೆಗಳಿಲ್ಲದ ಬರಿಯ ಯಂತ್ರ ಮಾನವರಾಗುತ್ತೇವೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...