Home / ಕವನ / ಕವಿತೆ / ಗೋರಿಗಳ ನಡುವೆ

ಗೋರಿಗಳ ನಡುವೆ


ಕಣ್ತೆರೆಯುತ್ತಲೆ ಕಣ್ಮುಚ್ಚಿದ ಕಂದಮ್ಮಗಳೇ
ಅರಳುತ್ತಲೆ ಉರಿದುಹೋದ ಅಕ್ಕಂದಿರೆ, ತಂಗಿಯರೇ
ಬದುಕುತ್ತಲೆ ಬೀದಿಪಾಲು-ತಾಯಂದಿರೆ, ತಂದೆಯರೇ
ಕರೆಯುತ್ತಲೆ ಕಮರಿಹೋದ ಗೋರಿ ಗೆಳೆಯರೇ

ನಡುವೆ ನಿಂತವನ
ಮನಸು ಚಿಂತೆವನ
ಉರಿಯುತ್ತಿದೆ ಕಾಡು
ಮುರಿಯುತ್ತಿದೆ ಮಾಡು

ಮನಸಿನ ಮಾತು
ಕಣ್ಣಲೆ ಹೂತು
ಅರಿವಾಗದು ಅಲ್ಲಿ
ಅದು ನೀರಿಲ್ಲದ ನಲ್ಲಿ.

ನಗವಿದ್ದರೆ, ನಗುವಿದ್ದರೆ
ಮುಗಿಬೀಳುವರಲ್ಲಿ.
ನಿಜ ಮುಚ್ಚುತ, ಹುಸಿ ಬಿಚ್ಚುತ
ಹಸಿವಾದರೂ ಹಸಿರಾಗುತ
ಅವರಿವರಿಗೆ ಉಸಿರಾದರೆ
ಹೆಸರಾಗುವುದಲ್ಲಿ
ಮನದಾಳವ ತೋಡಿದರೆ
ಕೆಸರಾಗುವುದಲ್ಲಿ
ಮೊರೆ ಹೊಕ್ಕೆನು ಇಲ್ಲಿ


ಗೋಡೆಗಳಾದರು ಕಂಬಗಳಾದರು
ಮಾತು ಮರೆಯುವ ಮೃಗಗಳಾದರು
ಸತು ಮುರಿಯುವ ತೋಳಗಳಾದರು
ಮನಸಿಗೆ ಮುಷ್ಟಿಯ ತೋಳುಗಳಾದರು.

ಬೆಳಕಿಗೆ ಬರಿದೆ ಕತ್ತಲ ಕೊರೆದೆ
ಮೀಟುವ ತಂತಿ ಮಿನುಗುವ ತಾರೆ-
ಕಾಣದೆ, ಕಡೆಗೆ ನಾನೇ ಕತ್ತಲು
ಕಣ್ಕಟ್ಟಿದ ವಿಷ-ಬಾಳಿನ ಕುಯಿಲು.


ಮನಸಿಲ್ಲವೆ ನಿಮಗಾದರು?
ದನಿಯಿಲ್ಲವೆ ನಿಜ-ಕಾದರು?
ನನ್ನೆದೆ ಬೆಳಕಿನ ಗೋರಿಗಳೆ
ಬಾಳಿನ ಬಯಲಿನ ಭೇರಿಗಳೆ.

ಅಳಲಿನ ಅನುಭವ ಆಳಕೆ ತಟ್ಟಿ
ಮನುಜತೆ ಮಾತು ಮೂಲಕ ಮುಟ್ಟಿ
ಕಲಕುವ ಅಲೆಗಳು, ಎದೆ ಮುಟ್ಟುವ ಮಜಲು
ಗೋರಿಗಳಾ ಒಡಲು-ಈಗಾಯಿತು ಕಡಲು.

ಗೋರಿಗೊರಳುಗಳು ಉಬ್ಬಿ ಬಂದವು
ಬೆಂದ ಮನಸನು ತಬ್ಬಿ ನಿಂದವು
ತೇವಗೊಳ್ಳುತ ತೇವಗೊಳಿಸುತ
ತೆರಳು ಎಂದವು ಬಾಳಿನ ಹರಿತಕೆ
ಮರಳು ಎಂದವು ಗೋಳಿನ ಇರಿತಕೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...