Home / ಕವನ / ಕವಿತೆ / ಗೋರಿಗಳ ನಡುವೆ

ಗೋರಿಗಳ ನಡುವೆ


ಕಣ್ತೆರೆಯುತ್ತಲೆ ಕಣ್ಮುಚ್ಚಿದ ಕಂದಮ್ಮಗಳೇ
ಅರಳುತ್ತಲೆ ಉರಿದುಹೋದ ಅಕ್ಕಂದಿರೆ, ತಂಗಿಯರೇ
ಬದುಕುತ್ತಲೆ ಬೀದಿಪಾಲು-ತಾಯಂದಿರೆ, ತಂದೆಯರೇ
ಕರೆಯುತ್ತಲೆ ಕಮರಿಹೋದ ಗೋರಿ ಗೆಳೆಯರೇ

ನಡುವೆ ನಿಂತವನ
ಮನಸು ಚಿಂತೆವನ
ಉರಿಯುತ್ತಿದೆ ಕಾಡು
ಮುರಿಯುತ್ತಿದೆ ಮಾಡು

ಮನಸಿನ ಮಾತು
ಕಣ್ಣಲೆ ಹೂತು
ಅರಿವಾಗದು ಅಲ್ಲಿ
ಅದು ನೀರಿಲ್ಲದ ನಲ್ಲಿ.

ನಗವಿದ್ದರೆ, ನಗುವಿದ್ದರೆ
ಮುಗಿಬೀಳುವರಲ್ಲಿ.
ನಿಜ ಮುಚ್ಚುತ, ಹುಸಿ ಬಿಚ್ಚುತ
ಹಸಿವಾದರೂ ಹಸಿರಾಗುತ
ಅವರಿವರಿಗೆ ಉಸಿರಾದರೆ
ಹೆಸರಾಗುವುದಲ್ಲಿ
ಮನದಾಳವ ತೋಡಿದರೆ
ಕೆಸರಾಗುವುದಲ್ಲಿ
ಮೊರೆ ಹೊಕ್ಕೆನು ಇಲ್ಲಿ


ಗೋಡೆಗಳಾದರು ಕಂಬಗಳಾದರು
ಮಾತು ಮರೆಯುವ ಮೃಗಗಳಾದರು
ಸತು ಮುರಿಯುವ ತೋಳಗಳಾದರು
ಮನಸಿಗೆ ಮುಷ್ಟಿಯ ತೋಳುಗಳಾದರು.

ಬೆಳಕಿಗೆ ಬರಿದೆ ಕತ್ತಲ ಕೊರೆದೆ
ಮೀಟುವ ತಂತಿ ಮಿನುಗುವ ತಾರೆ-
ಕಾಣದೆ, ಕಡೆಗೆ ನಾನೇ ಕತ್ತಲು
ಕಣ್ಕಟ್ಟಿದ ವಿಷ-ಬಾಳಿನ ಕುಯಿಲು.


ಮನಸಿಲ್ಲವೆ ನಿಮಗಾದರು?
ದನಿಯಿಲ್ಲವೆ ನಿಜ-ಕಾದರು?
ನನ್ನೆದೆ ಬೆಳಕಿನ ಗೋರಿಗಳೆ
ಬಾಳಿನ ಬಯಲಿನ ಭೇರಿಗಳೆ.

ಅಳಲಿನ ಅನುಭವ ಆಳಕೆ ತಟ್ಟಿ
ಮನುಜತೆ ಮಾತು ಮೂಲಕ ಮುಟ್ಟಿ
ಕಲಕುವ ಅಲೆಗಳು, ಎದೆ ಮುಟ್ಟುವ ಮಜಲು
ಗೋರಿಗಳಾ ಒಡಲು-ಈಗಾಯಿತು ಕಡಲು.

ಗೋರಿಗೊರಳುಗಳು ಉಬ್ಬಿ ಬಂದವು
ಬೆಂದ ಮನಸನು ತಬ್ಬಿ ನಿಂದವು
ತೇವಗೊಳ್ಳುತ ತೇವಗೊಳಿಸುತ
ತೆರಳು ಎಂದವು ಬಾಳಿನ ಹರಿತಕೆ
ಮರಳು ಎಂದವು ಗೋಳಿನ ಇರಿತಕೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...