ಸಾಲ ಸರ್ಪ

ಸಾಲ ಸರ್ಪವು ಬಂದು
ಸಂಸಾರ ಸೇರಿತು
ಚಿತ್ತ ಚಿತ್ತವನೆಲ್ಲ
ಹುತ್ತವ ಮಾಡಿತು.

ಸಣ್ಣ ಸಂದೀಲಿ ತೂರಿ ಬಂದಾ ಸರ್ಪ
ಹೆಡೆಯತ್ತಿ, ಸತಿಗೆ ಆಯ್ತಲ್ಲ ಸವತಿ
ಸವತಿಯ ಸಂತತಿ ಬುಸುಗುಟ್ಟಿ ಬೆಳೆದಂತೆ
ಸಂಸಾರದಾಗೆ ಇನ್ನೆಂಥ ಶಾಂತಿ!

ಸುತ್ತಿ ಬಳಸಿದ ಸರ್ಪ, ಆಲಿಂಗನದ ದರ್ಪ
ಸತಿಯತ್ತ ಬಿಡಲಿಲ್ಲ, ಇತ್ತ ಸಲಿಗೆ ಬೆಳೆದಿಲ್ಲ;
ನಮ್ಮ ಸುಲಿಗೆ ನಿಂತಿಲ್ಲ.
ಕತ್ತಿನ ಸುತ್ತ ಎತ್ತಿ ಆಡುವ ಹೆಡೆ
ಮುತ್ತು ಕೊಟ್ಟೇನೆಂದರೆ ಭಯವು ಹೋಗಿಲ್ಲ!

ಮನೆಯ ತುಂಬೆಲ್ಲ ಬುಸು ಬುಸು ಸದ್ದು
ತಂತಿ ಮೀಟೊ ಮಿಡಿತ ಇನ್ನಿಲ್ಲವಾಯ್ತು
ಸತ್ತೋಯ್ತು ಮಾತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂಡಾಯ ಸಂವೇದನೆ : ಚರಿತ್ರೆಯ ನಡಿಗೆ
Next post ಭಗ್ನ ಹೃದಯಿ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…