ಬೂದಿಯ ಬೆಳಕು

ರಕುತದ ಕಣದಾಗೆ ಬಡತನದ ಸುಗ್ಗಿ
ಮೆದೆ ಮೆದೆಯ ಸದೆಬಡಿದು ಹಿರಿದಾಗಿ ಹಿಗ್ಗಿ
ಬೆವರು ಹರಿಸಿದಾ ಕನಸು ಬತ್ತಿಹೋಯ್ತು
ಮೂಳೆಮೂಳೆಯ ಮಾತು ಸತ್ತುಹೋಯ್ತು.

ಮನೆ, ಮಡಕೆ, ಮಂಚದಲಿ
ಮನಮನದ ಮೂಲೇಲಿ
ಬುಸುಗುಡುವ ಬರ ಹರಿದು
ಹಸಿರು ಹಾಸಿಗೆಯೆಲ್ಲ ಉರಿದುಹೋಯ್ತು
ಮಣ್ಣ ಕಣಕಣವೆಲ್ಲ ಬೂದಿಯಾಯ್ತು.

ಬೂದಿ ಬದುಕಿನ ಒಳಗೆ ಉರಿ ಅರಳುವಾ ಆಸೆ
ಒಣಮರದ ಮನದಾಗೆ ಹಕ್ಕಿಯಾಗುವ ಆಸೆ
ಮನೆ ಮೈ ಮನಕೆಲ್ಲ ಬಡಿದಂಥ ಬರವನ್ನು
ಸುಟ್ಟು ಸುವಾಸನೆಯ ಕೊಡುವ ಆಸೆ
ಬೂದೀಲೆ ಬೆಳಕು ಉರಿಸುವಾಸೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂಡಾಯ : ಯಾಕೆ ಜೀವಂತ?
Next post ಕೋಳಿ ಕಣ್ಣೀರು

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…