ಬೆಂಕಿ

ಒಡಲಿನಾಗೆ ಸಿಡಿಲು ಕುಂತು
ಕೂಗು ಹಾಕಿತು.
ನೆತ್ತರಾಗೆ ತತ್ತಿಯಿಟ್ಟು
ತೇಲಿಬಿಟ್ಟಿತು.

ಕೆಂಡದುಂಡೆಯಂಥ ತತ್ತಿ
ಕನಸು ಕಟ್ಟಿತು-
ಅದು ಬಿರುಕು ಬಿಟ್ಟಿತು,
ನೆತ್ತರಲ್ಲಿ ತತ್ತಿಯೊಡೆದು ಬಂದುಬಿಟ್ಟವು-
ಮರಿಗಳು ಬಂದುಬಿಟ್ಟವು.
ಮೌನದಾಗೆ ಮೈಯ ತಿಂದು ಮಾತಾಡಿದವು-
ಮರಿಗಳು ಮಾತಾಡಿದವು.

ಉರಿವ ಒಡಲಿನೊಳಗಿನಿಂದ
ಸೀಳಿಕೊಂಡು ಬಂದವು.
ಹೊರಗೆ ಬೀದಿಬೀದಿಯಲ್ಲಿ
ಧಗಧಗನೆ ಉರಿದವು.

ಮಲಗಿ ಮುಲುಕುತಿದ್ದ ಮಣ್ಣು
ಕೆಂಗಣ್ಣ ತೆರೆಯಿತು
ಘಾಸಿಗೊಂಡ ಗಿಡಗಳು
ಬಾಯಿಲ್ಲದ ಮರಗಳು
ದಟ್ಟಯಿಸುವ ದನಿಯಾಗಿ
ಮುಗಿಲಮಟ್ಟ ನಿಂತವು
ಮನಸಿನೊಳಗೆ ಇಳಿದವು
ಬೆಂಕಿಯಾಗಿ ಬೆಳೆದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇವತ್ತಿನ ಸಾಹಿತ್ಯ : ಯಾಕೆ ಪ್ರಖರವಾಗಿಲ್ಲ?
Next post ಕನಸು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…