Home / ಲೇಖನ / ಇತರೆ / ಇದು ಮೊದಲು

ಇದು ಮೊದಲು

ಪ್ರಿಯ ಸಖಿ
ಅನ್ನವನು ಕೊಡು ಮೊದಲು
ಬಟ್ಟೆಯನು ಕೊಂಡು ಉಡಲು
ಕಟ್ಟಿಕೊಡು ಮನೆಗಳನು
ಬಳಿಕ ನೀನು ಕವಿಯಾಗಿ ಬಾ
ನೀತಿವಿದನಾಗಿ ಬಾ
ಶಾಸ್ತ್ರಿಯಾಗಿ ಧಾರ್ಮಿಕನಾಗಿ
ಮನುಜಕತೆಯನು ಕಲಿಸು ಬಾ
ಇವನದನು ಕಲಿಯ ಬಲ್ಲ!
ಇದು ಮೊದಲು ಆಮೇಲೆ ಉಳಿದುದೆಲ್ಲ!
ಗೋಪಾಲಕೃಷ್ಣ ಅಡಿಗರ ‘ಇದು ಮೊದಲು’ ಕವನದ ಈ ಕೊನೆಯ ಸಾಲುಗಳು ಮನವನ್ನು ಹೊಕ್ಕು ಎಷ್ಟೊಂದು ಆಳವಾಗಿ ತಟ್ಟುತ್ತವೆಯಲ್ಲವೇ ಸಖಿ? ಶಾಸ್ತ್ರ,  ನೀತಿ, ತತ್ವ, ಮೌಲ್ಯ, ಕಾನೂನು, ಮಾನವೀಯತೆ ಎಷ್ಟೆಲ್ಲಾ ಬುದ್ದಿ ಹೇಳಲು ತಯಾರಾಗಿದ್ದೇವೆ ನಾವು! ಆದರೆ ಹಸಿದ ಹೊಟ್ಟೆಗೆ ಅನ್ನ ನೀಡದೇ, ಮೈ ಮುಚ್ಚಲು ಬಟ್ಟೆ ಕೊಡದೇ, ಸುರಕ್ಷಿತವಾಗಿರಲು ಮನೆಯ ನೀಡದೇ ಏನು ಹೇಳಿದರೇನು? ಎಲ್ಲ ವ್ಯರ್ಥ ಎನ್ನುತ್ತಾರೆ ಕವಿ.

ಹಸಿದ ಹೊಟ್ಟೆಯ ಮುಂದೆ, ಬದುಕಿಗೆ ಬೇಕೇಬೇಕಾದ ಕೆಲವೊಂದು ಮೂಲಭೂತ ಅವಶ್ಶಕತೆಗಳ ಮುಂದೆ ಯಾವುದೇ ನೀತಿ-ತತ್ವಗಳೂ ಬೆಲೆಯಿಲ್ಲದ್ದಾಗುತ್ತದೆ. ಹೇಗಾದರೂ ಸರಿ ಏನು ಮಾಡಿಯಾದರೂ ಸರಿ ಹೊಟ್ಟೆ ತುಂಬಿಸಿಕೊಳ್ಳುವದು, ತನ್ಮೂಲಕ ಬದುಕುಳಿಯುವುದು ಹಸಿದವನ ಗುರಿಯಾಗಿರುತ್ತದೆ. ಅಲ್ಲಿ ಯಾವುದೇ ನೀತಿ-ನಿಯಮವೂ ಅವನನ್ನು ಎಚ್ಚರಿಸುವುದಿಲ್ಲ.

ಸಖಿ, ಇಂದಿನ ಸಮಾಜದ ಭ್ರಷ್ಟತೆಗೆ ಮೂಲ ಕಾರಣವೂ ಹಸಿವೇ ಆಗಿದೆ ಎಂಬುದು ಸಮಾಜವಾದಿಗಳ ನಿಲುವು. ಹಸಿವು ಹಿಂಗದ ಲಕ್ಷಾಂತರ ಒಡಲುಗಳು ಯಾವ ಕೀಳು ಮಟ್ಟಕ್ಕಾದರೂ ಇಳಿದು ಹಸಿವು ಹಿಂಗಿಸಿಕೊಳ್ಳಲು ಹಾತೊರೆಯುತ್ತವೆ. ಅದಕ್ಕೆಂದೇ ಕವಿ ಶೇಕ್ಸ್‍ಪಿಯರ್ “ಹಸಿವು ಎಲ್ಲವನ್ನೂ ಕಲಿಸುತ್ತದೆ” ಎನ್ನುತ್ತಾನೆ. ಉತ್ತಮ ಸಮಾಜದ ನಿರ್ಮಾಣವಾಗಬೇಕಾದರೆ ಮೊದಲು ಮನುಷ್ಯನ ಮೂಲಭೂತ ಅವಶ್ಶಕತೆಗಳನ್ನು ಪೂರೈಸಬೇಕು. ನಂತರವಷ್ಟೇ ನೀತಿ, ಕಾನೂನು, ಧರ್ಮ, ಕಲೆ, ಮಾನವೀಯತೆ ಇತ್ಯಾದಿ ಅವನಿಗೆ ಅರ್ಥವಾದಾವು. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...