ಎಚ್ಚರಿಕೆ

ಹಣೆ ಬರಹದಣೆಕಟ್ಟು
ಜಾತಿ ಮತಗಳ ಸುಟ್ಟು
ಬಂದೇವು ಬಡವರು
ಹೊಸ ಪಂಜು ಹಿಡಿದು.

ಭೋರ್ಗರೆವ ನೀರೊಳಗೆ
ಬಡವರೊಂದಾದೇವು
ಹನಿ ಹನಿಯ ಕಿಡಿಗೊಳಿಸಿ
ಅಲೆಯಾಗಿ ಹರಿದೇವು.

ಅಪ್ಪಳಿಸಿ ಅಲೆಯಾಗ್ನಿ
ಬೆಟ್ಟ ಬೂದಿಯಾದೀತು
ಮಂತ್ರ ಹೇಳುವ ಮರ
ಮೊದಲೆ ಬಿದ್ದಿತು.

ರತ್ನಗಂಬಳಿ ಪೀಠ
ಸುಳ್ಳು ಸಂಸ್ಕೃತಿ ಪಾಠ
ಉರಿ ಉಕ್ಕುವ ನೆರೆಗೆ ಸಿಕ್ಕಿ
ಅತ್ತು ಕರೆದಾವು-
ಸತ್ತು ಹೋದಾವು.

ಕೊಚ್ಚಿ ಹಾಕುವ ಕಿಚ್ಚು
ಹುಚ್ಚಾಗದಂತೆ
ಸುಟ್ಟ ಹಾದಿಯ ತುಂಬ
ಹೊಸ ಹಾಡು ಹರಿದೀತು
ಹೊಸ ಮನಸು ಮೆರೆದೀತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೊಫೆಶನಲಿಸಂ ಎಂಬ ಮಾಯೆ
Next post ಮಾತಿನ ಮರ್ಮ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…